<p>ಪ್ರಜಾವಾಣಿ ವಾರ್ತೆ</p>.<p><strong>ಕಾಳಗಿ</strong>: ‘ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ₹5ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರಲ್ಲಿ ₹2ಕೋಟಿ ಕಾಳಗಿ ಪಟ್ಟಣದ ಅಭಿವೃದ್ಧಿಗೆ ಖರ್ಚು ಮಾಡಲು ಉದ್ದೇಶಿಸಲಾಗಿದೆ’ ಎಂದು ಜಿ.ಪಂ ಮಾಜಿ ಸದಸ್ಯ ರಾಜೇಶ ಗುತ್ತೇದಾರ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜನತೆಗೆ ನೀಡಿರುವ ಭರವಸೆಯಂತೆ ಅಧಿವೇಶನ ಮುಗಿದ ಕೂಡಲೇ ವಾರ್ಡ್ ನಂ.1ರಲ್ಲಿ ಮಾದರಿ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಅವಶ್ಯಕತೆ ಇದ್ದಲ್ಲಿ ಈ ಶೌಚಾಲಯ ನಿರ್ಮಿಸಲಾಗುವುದು ಎಂದರು.</p>.<p>ಎಲ್ಲಾ ವಾರ್ಡ್ಗಳಲ್ಲಿ ಅತಿ ಅಗತ್ಯವೆನಿಸುವ ಕಾಮಗಾರಿಗಳಿಗೆ ಒತ್ತು ಕೊಡಲಾಗುವುದು. ಈವರೆಗೆ ಸ್ಥಳೀಯವಾಗಿ ವಿವಿಧ ಕಾಮಗಾರಿಗಳಿಗೆ ₹50ಲಕ್ಷ ಅನುದಾನ ವೆಚ್ಚ ಮಾಡಲಾಗಿದೆ. ಏತ ನೀರಾವರಿ ಅಭಿವೃದ್ಧಿಗೆ ಸರ್ಕಾರದಿಂದ ₹4ಕೋಟಿ ಮಂಜೂರು ಮಾಡಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಅಭಿವೃದ್ಧಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಲಾರದೆ ಎಲ್ಲರೂ ಕೈಜೋಡಿಸಿ ಸಹಕಾರ ನೀಡಬೇಕು’ ಎಂದು ವಿರೋಧ ಪಕ್ಷದವರಿಗೆ ಕಿವಿಮಾತು ಹೇಳಿದರು.</p>.<p>ಮುಖಂಡ ವಿಶ್ವನಾಥ ವನಮಾಲಿ, ಪರಮೇಶ್ವರ ಮಡಿವಾಳ, ಶಾಮರಾವ ಕಡಬೂರ, ಸಿದ್ರಾಮಪ್ಪ ಕಮಲಾಪುರ, ರವಿದಾಸ ಪತಂಗೆ, ಸಿದ್ದಲಿಂಗ ಗುತ್ತೇದಾರ, ಮೆಹೆಬೂಬಬೇಗ ಬಿಜಾಪುರ, ಪಟ್ಟಣ ಪಂಚಾಯಿತಿ ನೂತನ ಸದಸ್ಯರಾದ ಬಸವರಾಜ ಮಡಿವಾಳ, ಗುರುರಾಜ ಮದ್ದೂರ, ಶರಣಪ್ಪ ಬೇಲೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಕಾಳಗಿ</strong>: ‘ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ₹5ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರಲ್ಲಿ ₹2ಕೋಟಿ ಕಾಳಗಿ ಪಟ್ಟಣದ ಅಭಿವೃದ್ಧಿಗೆ ಖರ್ಚು ಮಾಡಲು ಉದ್ದೇಶಿಸಲಾಗಿದೆ’ ಎಂದು ಜಿ.ಪಂ ಮಾಜಿ ಸದಸ್ಯ ರಾಜೇಶ ಗುತ್ತೇದಾರ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜನತೆಗೆ ನೀಡಿರುವ ಭರವಸೆಯಂತೆ ಅಧಿವೇಶನ ಮುಗಿದ ಕೂಡಲೇ ವಾರ್ಡ್ ನಂ.1ರಲ್ಲಿ ಮಾದರಿ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಅವಶ್ಯಕತೆ ಇದ್ದಲ್ಲಿ ಈ ಶೌಚಾಲಯ ನಿರ್ಮಿಸಲಾಗುವುದು ಎಂದರು.</p>.<p>ಎಲ್ಲಾ ವಾರ್ಡ್ಗಳಲ್ಲಿ ಅತಿ ಅಗತ್ಯವೆನಿಸುವ ಕಾಮಗಾರಿಗಳಿಗೆ ಒತ್ತು ಕೊಡಲಾಗುವುದು. ಈವರೆಗೆ ಸ್ಥಳೀಯವಾಗಿ ವಿವಿಧ ಕಾಮಗಾರಿಗಳಿಗೆ ₹50ಲಕ್ಷ ಅನುದಾನ ವೆಚ್ಚ ಮಾಡಲಾಗಿದೆ. ಏತ ನೀರಾವರಿ ಅಭಿವೃದ್ಧಿಗೆ ಸರ್ಕಾರದಿಂದ ₹4ಕೋಟಿ ಮಂಜೂರು ಮಾಡಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಅಭಿವೃದ್ಧಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಲಾರದೆ ಎಲ್ಲರೂ ಕೈಜೋಡಿಸಿ ಸಹಕಾರ ನೀಡಬೇಕು’ ಎಂದು ವಿರೋಧ ಪಕ್ಷದವರಿಗೆ ಕಿವಿಮಾತು ಹೇಳಿದರು.</p>.<p>ಮುಖಂಡ ವಿಶ್ವನಾಥ ವನಮಾಲಿ, ಪರಮೇಶ್ವರ ಮಡಿವಾಳ, ಶಾಮರಾವ ಕಡಬೂರ, ಸಿದ್ರಾಮಪ್ಪ ಕಮಲಾಪುರ, ರವಿದಾಸ ಪತಂಗೆ, ಸಿದ್ದಲಿಂಗ ಗುತ್ತೇದಾರ, ಮೆಹೆಬೂಬಬೇಗ ಬಿಜಾಪುರ, ಪಟ್ಟಣ ಪಂಚಾಯಿತಿ ನೂತನ ಸದಸ್ಯರಾದ ಬಸವರಾಜ ಮಡಿವಾಳ, ಗುರುರಾಜ ಮದ್ದೂರ, ಶರಣಪ್ಪ ಬೇಲೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>