<p>ಕಾಳಗಿ: ಬೆಂಗಳೂರಿನ ಸತ್ಯ ಎಜ್ಯುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಶನಿವಾರ ಜಿಲ್ಲಾ ಪಂಚಾಯಿತಿ, ಬಸವೇಶ್ವರ ಟೀಚಿಂಗ್ ಮತ್ತು ಜನರಲ್ ಆಸ್ಪತ್ರೆ ಮತ್ತು ಎನ್ಜಿಎನ್ ಫೌಂಡೇಶನ್ ಸಹಭಾಗಿತ್ವದಲ್ಲಿ ‘ಸಂತಸಮಯ ವೃದ್ಧಾಪ್ಯ ಮಾರ್ಗ’ ಯೋಜನೆಯಡಿ ಪಟ್ಟಣದಲ್ಲಿ ವೃದ್ಧರಿಗಾಗಿ ಆಯೋಜಿಸಿದ್ದ ಆರೋಗ್ಯ ಶಿಬಿರವು ಯಶಸ್ವಿಯಾಗಿ ನೆರವೇರಿತು.</p>.<p>ಇಲ್ಲಿನ ಬನಶಂಕರಿದೇವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಒಟ್ಟು 182 ಮಂದಿ ಪ್ರಯೋಜನ ಪಡೆದುಕೊಂಡರು.</p>.<p>ಸಾಮಾನ್ಯ ವೈದ್ಯಕೀಯ, ನೇತ್ರ, ಇಎನ್ಟಿ (ಕಣ್ಣು–ಮೂಗು–ಗಂಟಲು), ಚರ್ಮ, ಆರ್ಥೋ ಮತ್ತು ಮನೋವೈದ್ಯಕೀಯ ತಪಾಸಣೆಗಳನ್ನು ತಜ್ಞ ವೈದ್ಯರು ನಡೆಸಿದರು. ಭಾಗವಹಿಸಿದ ಹಿರಿಯ ನಾಗರಿಕರಿಗೆ ಅಗತ್ಯವಾದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ಶಿಬಿರದ ವೇಳೆ ವೈದ್ಯರು ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳನ್ನು ಗಮನದಿಂದ ಪರಿಶೀಲಿಸಿ, ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಜನರು ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿ ಶಿಬಿರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಾಧಿಕಾರಿ ಡಾ.ಸಂತೋಷ, ಸಮುದಾಯ ಸಂಘಟನಾಧಿಕಾರಿ ಡಾ.ರೇಣುಕಾದೇವಿ ಕಾಬಾ ಸೇರಿದಂತೆ ಟ್ರಸ್ಟ್ನ ಕಲಬುರಗಿ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-139524798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಗಿ: ಬೆಂಗಳೂರಿನ ಸತ್ಯ ಎಜ್ಯುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಶನಿವಾರ ಜಿಲ್ಲಾ ಪಂಚಾಯಿತಿ, ಬಸವೇಶ್ವರ ಟೀಚಿಂಗ್ ಮತ್ತು ಜನರಲ್ ಆಸ್ಪತ್ರೆ ಮತ್ತು ಎನ್ಜಿಎನ್ ಫೌಂಡೇಶನ್ ಸಹಭಾಗಿತ್ವದಲ್ಲಿ ‘ಸಂತಸಮಯ ವೃದ್ಧಾಪ್ಯ ಮಾರ್ಗ’ ಯೋಜನೆಯಡಿ ಪಟ್ಟಣದಲ್ಲಿ ವೃದ್ಧರಿಗಾಗಿ ಆಯೋಜಿಸಿದ್ದ ಆರೋಗ್ಯ ಶಿಬಿರವು ಯಶಸ್ವಿಯಾಗಿ ನೆರವೇರಿತು.</p>.<p>ಇಲ್ಲಿನ ಬನಶಂಕರಿದೇವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಒಟ್ಟು 182 ಮಂದಿ ಪ್ರಯೋಜನ ಪಡೆದುಕೊಂಡರು.</p>.<p>ಸಾಮಾನ್ಯ ವೈದ್ಯಕೀಯ, ನೇತ್ರ, ಇಎನ್ಟಿ (ಕಣ್ಣು–ಮೂಗು–ಗಂಟಲು), ಚರ್ಮ, ಆರ್ಥೋ ಮತ್ತು ಮನೋವೈದ್ಯಕೀಯ ತಪಾಸಣೆಗಳನ್ನು ತಜ್ಞ ವೈದ್ಯರು ನಡೆಸಿದರು. ಭಾಗವಹಿಸಿದ ಹಿರಿಯ ನಾಗರಿಕರಿಗೆ ಅಗತ್ಯವಾದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ಶಿಬಿರದ ವೇಳೆ ವೈದ್ಯರು ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳನ್ನು ಗಮನದಿಂದ ಪರಿಶೀಲಿಸಿ, ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಜನರು ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿ ಶಿಬಿರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯಾಧಿಕಾರಿ ಡಾ.ಸಂತೋಷ, ಸಮುದಾಯ ಸಂಘಟನಾಧಿಕಾರಿ ಡಾ.ರೇಣುಕಾದೇವಿ ಕಾಬಾ ಸೇರಿದಂತೆ ಟ್ರಸ್ಟ್ನ ಕಲಬುರಗಿ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-139524798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>