<p>ಕಾಳಗಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.</p>.<p>ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಯಿತು.</p>.<p>‘ಭಾಗ್ಯಜ್ಯೋತಿ ಉಚಿತ ವಿದ್ಯುತ್ ಬಳಕೆ ಇದ್ದರೂ ಜೆಸ್ಕಾಂನವರು ವಿನಾಕಾರಣ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದಂಡ ವಿಧಿಸುತ್ತಿದ್ದಾರೆ. ಕಾಳಗಿಯಿಂದ ಕಲಬುರಗಿಗೆ ಸಂಚರಿಸಲು ಬಸ್ ಕೊರತೆ ಬಹಳಷ್ಟಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯ ಸಮಪರ್ಕವಾಗಿ ವಿತರಣೆಯಾಗುತ್ತಿಲ್ಲ’ ಎಂಬ ಹಲವಾರು ವಿಷಯಗಳು ಚರ್ಚೆಗೆ ಬಂದವು.</p>.<p>‘ಸರ್ಕಾರ ಜನತೆಗೆ ಕೊಟ್ಟಿರುವ ಭರವಸೆಯಂತೆ ಗ್ಯಾರಂಟಿ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಏನೇ ಸಮಸ್ಯೆಯಿದ್ದಲ್ಲಿ ಸರಿಪಡಿಸೋಣ. ಆದರೆ, ವಿನಾಕಾರಣ ಜನತೆಗೆ ತೊಂದರೆ ಕೊಡುವುದು ಸರಿಯಲ್ಲ, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಸಭೆಯ ಅಧ್ಯಕ್ಷರು ತಾಕೀತು ಮಾಡಿದರು.</p>.<p>ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಸಮಿತಿ ಸದಸ್ಯರಾದ ಶರಣು ಮಜ್ಜಗಿ, ಘುಡುಸಾಬ ಮಾಸ್ಟರ್, ಶರಣು ಹೆಬ್ಬಾಳ, ಪುಷ್ಪಾ ಚವ್ಹಾಣ, ಗೀತಾ ಸಿಂಗಶೆಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-31-444240985</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಗಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.</p>.<p>ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಯಿತು.</p>.<p>‘ಭಾಗ್ಯಜ್ಯೋತಿ ಉಚಿತ ವಿದ್ಯುತ್ ಬಳಕೆ ಇದ್ದರೂ ಜೆಸ್ಕಾಂನವರು ವಿನಾಕಾರಣ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದಂಡ ವಿಧಿಸುತ್ತಿದ್ದಾರೆ. ಕಾಳಗಿಯಿಂದ ಕಲಬುರಗಿಗೆ ಸಂಚರಿಸಲು ಬಸ್ ಕೊರತೆ ಬಹಳಷ್ಟಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯ ಸಮಪರ್ಕವಾಗಿ ವಿತರಣೆಯಾಗುತ್ತಿಲ್ಲ’ ಎಂಬ ಹಲವಾರು ವಿಷಯಗಳು ಚರ್ಚೆಗೆ ಬಂದವು.</p>.<p>‘ಸರ್ಕಾರ ಜನತೆಗೆ ಕೊಟ್ಟಿರುವ ಭರವಸೆಯಂತೆ ಗ್ಯಾರಂಟಿ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಏನೇ ಸಮಸ್ಯೆಯಿದ್ದಲ್ಲಿ ಸರಿಪಡಿಸೋಣ. ಆದರೆ, ವಿನಾಕಾರಣ ಜನತೆಗೆ ತೊಂದರೆ ಕೊಡುವುದು ಸರಿಯಲ್ಲ, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಸಭೆಯ ಅಧ್ಯಕ್ಷರು ತಾಕೀತು ಮಾಡಿದರು.</p>.<p>ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಸಮಿತಿ ಸದಸ್ಯರಾದ ಶರಣು ಮಜ್ಜಗಿ, ಘುಡುಸಾಬ ಮಾಸ್ಟರ್, ಶರಣು ಹೆಬ್ಬಾಳ, ಪುಷ್ಪಾ ಚವ್ಹಾಣ, ಗೀತಾ ಸಿಂಗಶೆಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-31-444240985</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>