<p>ಕಾಳಗಿ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳಗಿ ಪಟ್ಟಣದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಂಕಜಾ ಎ. ಸೂಚನೆ ನೀಡಿದ್ದಾರೆ.</p>.<p>‘ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದರೆ ಅಥವಾ ಕುಸಿದು ಬೀಳುವ ಸಂಭವವಿದ್ದರೆ ಅಂಥವುಗಳ ಬಗ್ಗೆ ಸಂಬಂಧಪಟ್ಟವರು ಮೇಲಧಿಕಾರಿಗಳಿಗೆ ಕೂಡಲೇ ವರದಿ ಸಲ್ಲಿಸಬೇಕು ಮತ್ತು ಬೇರೆ ಸುರಕ್ಷಿತ ಕಟ್ಟಡಗಳನ್ನು ಹೊಂದಿಸಿಕೊಳ್ಳಬೇಕು ಎಂದಿದ್ದಾರೆ.</p>.<p>ಖಾಸಗಿ ಮಳಿಗೆ, ಮನೆ, ವಾಣಿಜ್ಯ ಸಂಕೀರ್ಣಗಳು ಬಳಕೆಗೆ ಯೋಗ್ಯವಲ್ಲದಾಗಿದ್ದರೆ ಕಟ್ಟಡಗಳ ಮಾಲೀಕರು ಅಥವಾ ಬಳಕೆದಾರರು ಕಟ್ಟಡ ಖಾಲಿ ಮಾಡಬೇಕು. ದುರಸ್ತಿ ಕೈಗೊಂಡು ಅಥವಾ ಬೇರೆಡೆ ಸ್ಥಳಾಂತರ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-31-211470990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಗಿ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳಗಿ ಪಟ್ಟಣದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಂಕಜಾ ಎ. ಸೂಚನೆ ನೀಡಿದ್ದಾರೆ.</p>.<p>‘ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದರೆ ಅಥವಾ ಕುಸಿದು ಬೀಳುವ ಸಂಭವವಿದ್ದರೆ ಅಂಥವುಗಳ ಬಗ್ಗೆ ಸಂಬಂಧಪಟ್ಟವರು ಮೇಲಧಿಕಾರಿಗಳಿಗೆ ಕೂಡಲೇ ವರದಿ ಸಲ್ಲಿಸಬೇಕು ಮತ್ತು ಬೇರೆ ಸುರಕ್ಷಿತ ಕಟ್ಟಡಗಳನ್ನು ಹೊಂದಿಸಿಕೊಳ್ಳಬೇಕು ಎಂದಿದ್ದಾರೆ.</p>.<p>ಖಾಸಗಿ ಮಳಿಗೆ, ಮನೆ, ವಾಣಿಜ್ಯ ಸಂಕೀರ್ಣಗಳು ಬಳಕೆಗೆ ಯೋಗ್ಯವಲ್ಲದಾಗಿದ್ದರೆ ಕಟ್ಟಡಗಳ ಮಾಲೀಕರು ಅಥವಾ ಬಳಕೆದಾರರು ಕಟ್ಟಡ ಖಾಲಿ ಮಾಡಬೇಕು. ದುರಸ್ತಿ ಕೈಗೊಂಡು ಅಥವಾ ಬೇರೆಡೆ ಸ್ಥಳಾಂತರ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-31-211470990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>