<p>ಕಾಳಗಿ: ತಾಲ್ಲೂಕಿನ ರಟಕಲ್ ಗ್ರಾಮದ ಮುರುಘೇಂದ್ರ ಶಿವಯೋಗಿಗಳ ವಿರಕ್ತಮಠದಲ್ಲಿ ನೀಲಕಂಠ ದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಏ.27ರಂದು ವಿಜೃಂಭಣೆಯಿಂದ ಜರುಗಲಿದೆ.</p>.<p>ಮಹೋತ್ಸವ ನಿಮಿತ್ತ ಗ್ರಾಮದಲ್ಲಿ ಒಂದು ತಿಂಗಳಿಂದ ಸಂಭ್ರಮದ ವಾತಾವರಣ ಮನೆಮಾಡಿದೆ. ಮಠದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.</p>.<p>ವಿವಿಧ ಮಠಾಧೀಶರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಂದ ಏ.13ರಂದು ಉದ್ಘಾಟನೆಗೊಂಡು, ಏ.25ರವರೆಗೆ ಸಾಗಿಬಂದ ಹಾನಗಲ್ಲ ಕುಮಾರ ಶಿವಯೋಗಿಗಳ ಪುರಾಣ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕ ಡಾ.ಅವಿನಾಶ ಜಾಧವ ಸಮ್ಮುಖದಲ್ಲಿ ಶನಿವಾರ ಮಹಾ ಮಂಗಲಗೊಂಡಿದೆ.</p>.<p>ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ, ರೈತರ ಹಿತಚಿಂತನೆ ಗೋಷ್ಠಿ, ಲಿಂಗದೀಕ್ಷೆ ಹಾಗೂ ಅಯ್ಯಾಚಾರ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಷಟಸ್ಥಲ ಧ್ವಜಾರೋಹಣ ಭಕ್ತಸಮೂಹಕ್ಕೆ ಮೆರುಗು ನೀಡಿದೆ.</p>.<p>ಇಂದು ಬೆಳಿಗ್ಗೆ 5ಗಂಟೆಗೆ ಹುಲಸೂರಿನ ಶಿವಾನಂದ ಸ್ವಾಮೀಜಿ ಅವರಿಂದ ನೀಲಕಂಠ ದೇವರಿಗೆ ಚಿನ್ಮಯಾನುಗೃಹ ಷಟಸ್ಥಲ ಬ್ರಹ್ಮೋಪದೇಶ ನಡೆಯಲಿದೆ.</p>.<p>ಬೆಳಿಗ್ಗೆ 10.30ಕ್ಕೆ ವಿವಿಧ ಮಠಾಧೀಶರ, ಗಣ್ಯರ ಸಮ್ಮುಖದಲ್ಲಿ ಶ್ರೀಗಳ ಶೂನ್ಯ ಸಿಂಹಾಸನರೋಹಣ ಹಾಗೂ ಸಮಾಜ ಸೇವಾ ದೀಕ್ಷೆ ಸಮಾರಂಭದ ಧರ್ಮ ಸಭೆ ಜರುಗಲಿದೆ ಎಂದು ಪಟ್ಟಾಧಿಕಾರ ಮಹೋತ್ಸವ ಸಮಿತಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-31-1768318398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಗಿ: ತಾಲ್ಲೂಕಿನ ರಟಕಲ್ ಗ್ರಾಮದ ಮುರುಘೇಂದ್ರ ಶಿವಯೋಗಿಗಳ ವಿರಕ್ತಮಠದಲ್ಲಿ ನೀಲಕಂಠ ದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಏ.27ರಂದು ವಿಜೃಂಭಣೆಯಿಂದ ಜರುಗಲಿದೆ.</p>.<p>ಮಹೋತ್ಸವ ನಿಮಿತ್ತ ಗ್ರಾಮದಲ್ಲಿ ಒಂದು ತಿಂಗಳಿಂದ ಸಂಭ್ರಮದ ವಾತಾವರಣ ಮನೆಮಾಡಿದೆ. ಮಠದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.</p>.<p>ವಿವಿಧ ಮಠಾಧೀಶರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಂದ ಏ.13ರಂದು ಉದ್ಘಾಟನೆಗೊಂಡು, ಏ.25ರವರೆಗೆ ಸಾಗಿಬಂದ ಹಾನಗಲ್ಲ ಕುಮಾರ ಶಿವಯೋಗಿಗಳ ಪುರಾಣ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕ ಡಾ.ಅವಿನಾಶ ಜಾಧವ ಸಮ್ಮುಖದಲ್ಲಿ ಶನಿವಾರ ಮಹಾ ಮಂಗಲಗೊಂಡಿದೆ.</p>.<p>ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ, ರೈತರ ಹಿತಚಿಂತನೆ ಗೋಷ್ಠಿ, ಲಿಂಗದೀಕ್ಷೆ ಹಾಗೂ ಅಯ್ಯಾಚಾರ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಷಟಸ್ಥಲ ಧ್ವಜಾರೋಹಣ ಭಕ್ತಸಮೂಹಕ್ಕೆ ಮೆರುಗು ನೀಡಿದೆ.</p>.<p>ಇಂದು ಬೆಳಿಗ್ಗೆ 5ಗಂಟೆಗೆ ಹುಲಸೂರಿನ ಶಿವಾನಂದ ಸ್ವಾಮೀಜಿ ಅವರಿಂದ ನೀಲಕಂಠ ದೇವರಿಗೆ ಚಿನ್ಮಯಾನುಗೃಹ ಷಟಸ್ಥಲ ಬ್ರಹ್ಮೋಪದೇಶ ನಡೆಯಲಿದೆ.</p>.<p>ಬೆಳಿಗ್ಗೆ 10.30ಕ್ಕೆ ವಿವಿಧ ಮಠಾಧೀಶರ, ಗಣ್ಯರ ಸಮ್ಮುಖದಲ್ಲಿ ಶ್ರೀಗಳ ಶೂನ್ಯ ಸಿಂಹಾಸನರೋಹಣ ಹಾಗೂ ಸಮಾಜ ಸೇವಾ ದೀಕ್ಷೆ ಸಮಾರಂಭದ ಧರ್ಮ ಸಭೆ ಜರುಗಲಿದೆ ಎಂದು ಪಟ್ಟಾಧಿಕಾರ ಮಹೋತ್ಸವ ಸಮಿತಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-31-1768318398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>