ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯರು ಲಿಂಗೈಕ್ಯರಾಗಿದ್ದರಿಂದ ಅವರ ಸ್ಥಾನವನ್ನು ಖಾಲಿ ಬಿಡಬಾರದು ಎಂಬ ಉದ್ದೇಶದಿಂದ ಉತ್ತರಾಧಿಕಾರಿ ಹೆಸರು ಸೂಚಿಸಿದ್ದೇವೆ. ಪೀಠಾಧಿಪತಿಗಳ ವಂಶದವರನ್ನೇ ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವ ಪರಂಪರೆಯಿದ್ದು, ಹೀಗಾಗಿ ಲಿಂಗೈಕ್ಯ ಶ್ರೀಗಳ ಪೂರ್ವಾಶ್ರಮದ ಸಹೋದರ ಗುರುನಂಜಯ್ಯ ಹಿರೇಮಠ ಅವರ ಮಗನ ಹೆಸರನ್ನು ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.