ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ವೃದ್ಧರು, ಅನಾಥ ಮಕ್ಕಳು, ಅಂಗವಿಕಲರು, ನಿರ್ಗತಿಕರಿದ್ದಾರೆ. ಆದರೆ ಇವರಿಗೆ ಸರ್ಕಾರದಿಂದ ದಿನಸಿ ಕಿಟ್ ನೀಡಿರುವುದಿಲ್ಲ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ರದ್ದುಗೊಂಡಿರುವ ಬಡ ಜನರು ದಿನಕ್ಕೆ ₹200ರಂತೆ ತಹಶೀಲ್ದಾರ್ ಕಚೇರಿಗೆ ಬಂದು ಪಾಳಿ ನಿಲ್ಲುತ್ತಿದ್ದಾರೆ. ಆದರೆ ಸಿಬ್ಬಂದಿ ಮುಂಜಾನೆ 11.30ರಿಂದ ಮಧ್ಯಾಹ್ನ 1.30ರ ವರೆಗೆ ಕಚೇರಿಗೆ ಬಂದು 3 ಗಂಟೆಗೆ ಮನೆಗೆ ಹೋಗುತ್ತಾರೆ ಎಂದು ಆಪಾದಿಸಿದ್ದಾರೆ.