ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ವಿಠ್ಠಲ ಹೇರೂರ ಅನುದಾನಿತ ಶಾಲೆಯ ಶಿಕ್ಷಕರ ಬಾಕಿ ವೇತನ ₹6 ಲಕ್ಷ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ ಖಿಲಾರಿ ಅವರು ಹಣವನ್ನು ಬಿಇಒಗೆ ನೀಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಬಿಇಒ ಅವರನ್ನು ಬಂಧಿಸಿದರು.