<p><strong>ಆಳಂದ:</strong> ತಾಲ್ಲೂಕಿನ ನಿಂಬಾಳ ಗ್ರಾಮದ ಚೆಕ್ಪೋಸ್ಟ್ಗೆ ಮಂಗಳವಾರ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು.</p>.<p>ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೆರೆಯ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ತಾಲ್ಲೂಕಿನ ನಿಂಬಾಳ, ಹಿರೋಳಿ, ಖಜೂರಿ ಮಾರ್ಗದ ಗಡಿ ಚೆಕ್ಪೋಸ್ಟ್ನ ಅಧಿಕಾರಿಗಳು ಎಚ್ಚರಿಂದ ಕಾರ್ಯನಿರ್ವಹಿಸಬೇಕು. ಎಲ್ಲ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಯಬೇಕು ಎಂದು ಸೂಚಿಸಿದರು.</p>.<p>₹10 ಲಕ್ಷಕ್ಕೂ ಮೇಲ್ಪಟ್ಟ ಹಣ ಸಿಕ್ಕರೆ ತಕ್ಷಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು, ಮದ್ಯ ಸಾಗಾಟ, ಉಡುಗೊರೆ, ಬಟ್ಟೆ, ಗೃಹಪಯೋಗಿ ಸಾಮಗ್ರಿಗಳ ಸಾಗಾಟದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.</p>.<p>ದಾಖಲೆಗಳನ್ನು ಪರಿಶೀಲಿಸಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ವಿದ್ಯುತ್, ಪ್ಯಾನ್ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ತಹಶೀಲ್ದಾರ್ ಪ್ರಕಾಶ ಹೊಸಮನಿ ಅವರಿಗೆ ತಿಳಿಸಿದರು.</p>.<p>ತಹಶೀಲ್ದಾರ್ ಪ್ರಕಾಶ ಹೊಸಮನಿ, ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಎಆರ್ಒ ಮಹಾಂತೇಶ ಮುಳಗುಂದ, ಶಿರಸ್ತೇದಾರ್ ಶ್ರೀನಿವಾಸ ಕುಲಕರ್ಣಿ, ಶರಣಬಸಪ್ಪ ಹಕ್ಕಿ, ಆನಂದ ಪೂಜಾರಿ, ಬಸವರಾಜ ಸಿಂಗಶೆಟ್ಟಿ, ಸಿಪಿಐ ಸಿದ್ರಾಮಯ್ಯ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ತಾಲ್ಲೂಕಿನ ನಿಂಬಾಳ ಗ್ರಾಮದ ಚೆಕ್ಪೋಸ್ಟ್ಗೆ ಮಂಗಳವಾರ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು.</p>.<p>ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೆರೆಯ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ತಾಲ್ಲೂಕಿನ ನಿಂಬಾಳ, ಹಿರೋಳಿ, ಖಜೂರಿ ಮಾರ್ಗದ ಗಡಿ ಚೆಕ್ಪೋಸ್ಟ್ನ ಅಧಿಕಾರಿಗಳು ಎಚ್ಚರಿಂದ ಕಾರ್ಯನಿರ್ವಹಿಸಬೇಕು. ಎಲ್ಲ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಯಬೇಕು ಎಂದು ಸೂಚಿಸಿದರು.</p>.<p>₹10 ಲಕ್ಷಕ್ಕೂ ಮೇಲ್ಪಟ್ಟ ಹಣ ಸಿಕ್ಕರೆ ತಕ್ಷಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು, ಮದ್ಯ ಸಾಗಾಟ, ಉಡುಗೊರೆ, ಬಟ್ಟೆ, ಗೃಹಪಯೋಗಿ ಸಾಮಗ್ರಿಗಳ ಸಾಗಾಟದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.</p>.<p>ದಾಖಲೆಗಳನ್ನು ಪರಿಶೀಲಿಸಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ವಿದ್ಯುತ್, ಪ್ಯಾನ್ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ತಹಶೀಲ್ದಾರ್ ಪ್ರಕಾಶ ಹೊಸಮನಿ ಅವರಿಗೆ ತಿಳಿಸಿದರು.</p>.<p>ತಹಶೀಲ್ದಾರ್ ಪ್ರಕಾಶ ಹೊಸಮನಿ, ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಎಆರ್ಒ ಮಹಾಂತೇಶ ಮುಳಗುಂದ, ಶಿರಸ್ತೇದಾರ್ ಶ್ರೀನಿವಾಸ ಕುಲಕರ್ಣಿ, ಶರಣಬಸಪ್ಪ ಹಕ್ಕಿ, ಆನಂದ ಪೂಜಾರಿ, ಬಸವರಾಜ ಸಿಂಗಶೆಟ್ಟಿ, ಸಿಪಿಐ ಸಿದ್ರಾಮಯ್ಯ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>