<p><strong>ಕಾಳಗಿ</strong>: ತಾಲ್ಲೂಕಿನ ವಿವಿಧೆಡೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಚೇರಿ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ಪಂಚಾಯಿತಿ ಸಭಾಂಗಣ ವೀಕ್ಷಿಸಿ, ಕಾಮಗಾರಿ ಕುರಿತು ಮಾಹಿತಿ ಪಡೆದರು. ಕೋಡ್ಲಿ ತಾಂಡಾ, ಪಸ್ತಾಪುರ, ಹೊಸಳ್ಳಿ.ಎಚ್., ತೇಗಲತಿಪ್ಪಿ ಮತ್ತು ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದರು.</p>.<p>ಕೋಡ್ಲಿ ತಾಂಡಾದಲ್ಲಿ ನಳಗಳು ಕಿತ್ತು ಹೋಗಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬಳಿಕ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.</p>.<p>‘ಅಡುಗೆ ಸಿಬ್ಬಂದಿಗಳು ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಸರಿಯಾದ ಅಡುಗೆ ತಯಾರಿಸಿ ಬಡಿಸಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯ ಗುಣಮಟ್ಟದ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಕಾಳಗಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಡಬ್ಲ್ಯೂಎಸ್ ಎಇಇ ಪ್ರವೀಣ, ಜೆಇ ಯುವರಾಜ್ ರಾಠೋಡ, ಪಿಡಿಒ ಗಳಾದ ಮಹಾನಂದ ಗುತ್ತೇದಾರ, ದೇವಿಂದ್ರ, ಸೋಮಶೇಖರ ಸೇರಿದಂತೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿದ್ದರು.</p>.<p>ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಿಇಒ ಜೆಇ ವಿರುದ್ಧ ವರದಿ ಸಲ್ಲಿಸಲು ಸೂಚನೆ ಎಸ್ಎಸ್ಎಲ್ಸಿ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ವಿವಿಧೆಡೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಚೇರಿ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ಪಂಚಾಯಿತಿ ಸಭಾಂಗಣ ವೀಕ್ಷಿಸಿ, ಕಾಮಗಾರಿ ಕುರಿತು ಮಾಹಿತಿ ಪಡೆದರು. ಕೋಡ್ಲಿ ತಾಂಡಾ, ಪಸ್ತಾಪುರ, ಹೊಸಳ್ಳಿ.ಎಚ್., ತೇಗಲತಿಪ್ಪಿ ಮತ್ತು ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದರು.</p>.<p>ಕೋಡ್ಲಿ ತಾಂಡಾದಲ್ಲಿ ನಳಗಳು ಕಿತ್ತು ಹೋಗಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಬಳಿಕ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.</p>.<p>‘ಅಡುಗೆ ಸಿಬ್ಬಂದಿಗಳು ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಸರಿಯಾದ ಅಡುಗೆ ತಯಾರಿಸಿ ಬಡಿಸಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯ ಗುಣಮಟ್ಟದ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಕಾಳಗಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಡಬ್ಲ್ಯೂಎಸ್ ಎಇಇ ಪ್ರವೀಣ, ಜೆಇ ಯುವರಾಜ್ ರಾಠೋಡ, ಪಿಡಿಒ ಗಳಾದ ಮಹಾನಂದ ಗುತ್ತೇದಾರ, ದೇವಿಂದ್ರ, ಸೋಮಶೇಖರ ಸೇರಿದಂತೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿದ್ದರು.</p>.<p>ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಿಇಒ ಜೆಇ ವಿರುದ್ಧ ವರದಿ ಸಲ್ಲಿಸಲು ಸೂಚನೆ ಎಸ್ಎಸ್ಎಲ್ಸಿ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>