<p><strong>ಕಲಬುರಗಿ</strong>: ‘ನೂತನ ಸಚಿವರ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕನಿಷ್ಠ ಎಂಟಕ್ಕೂ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ನೀರಾವರಿ, ಲೋಕೋಪಯೋಗಿ, ಕೈಗಾರಿಕೆ, ಶಾಲಾ ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ವೈದ್ಯಕೀಯ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಸ್ಥಾನಗಳನ್ನು ನೀಡಲು ಆಗ್ರಹಿಸಿದ್ದಾರೆ.</p>.<p>‘ಗೋವಿಂದರಾವ್ ಸಮಿತಿ ವರದಿಯನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು 371 (ಜೆ) ಕಲಂ ಪರಿಣಾಮಕಾರಿ ಅನುಷ್ಠಾನದ ಜೊತೆಗೆ ಜನಮಾನಸದ ಬೇಡಿಕೆಯಾದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾನ ನೀಡಬೇಕು. ಈ ಸಚಿವಾಲಯವನ್ನು ಕಲ್ಯಾಣದ ಸಚಿವರಿಗೆ ವಹಿಸಬೇಕು. ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳಿಯುವಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರಬಲ ಖಾತೆಗಳನ್ನು ಕಲ್ಯಾಣಕ್ಕೆ ನೀಡಬೇಕು. ಈ ಪ್ರದೇಶದ ರಚನಾತ್ಮಕ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಳ ಮಾಹಿತಿ ಇರುವ ರಾಷ್ಟ್ರ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯಕ್ಕೆ ಸಂಬಂಧಿಸಿ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-34-1665081530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ನೂತನ ಸಚಿವರ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕನಿಷ್ಠ ಎಂಟಕ್ಕೂ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ನೀರಾವರಿ, ಲೋಕೋಪಯೋಗಿ, ಕೈಗಾರಿಕೆ, ಶಾಲಾ ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ವೈದ್ಯಕೀಯ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಸ್ಥಾನಗಳನ್ನು ನೀಡಲು ಆಗ್ರಹಿಸಿದ್ದಾರೆ.</p>.<p>‘ಗೋವಿಂದರಾವ್ ಸಮಿತಿ ವರದಿಯನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು 371 (ಜೆ) ಕಲಂ ಪರಿಣಾಮಕಾರಿ ಅನುಷ್ಠಾನದ ಜೊತೆಗೆ ಜನಮಾನಸದ ಬೇಡಿಕೆಯಾದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾನ ನೀಡಬೇಕು. ಈ ಸಚಿವಾಲಯವನ್ನು ಕಲ್ಯಾಣದ ಸಚಿವರಿಗೆ ವಹಿಸಬೇಕು. ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳಿಯುವಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರಬಲ ಖಾತೆಗಳನ್ನು ಕಲ್ಯಾಣಕ್ಕೆ ನೀಡಬೇಕು. ಈ ಪ್ರದೇಶದ ರಚನಾತ್ಮಕ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಳ ಮಾಹಿತಿ ಇರುವ ರಾಷ್ಟ್ರ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯಕ್ಕೆ ಸಂಬಂಧಿಸಿ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-34-1665081530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>