<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಶನಿವಾರ ಭಾರಿ ಸುರಿದಿದೆ. ನದಿಗಳು ಉಕ್ಕಿಹರಿಯುತ್ತಿದ್ದು, ಜಲಾಶಯಗಳಿಂದ ಹೊರಹರಿವಿನ ಪ್ರಮಾಣ ಹೆಚ್ಚಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.</p>.<p>ಕಲಬುರಗಿ ನಗರದಲ್ಲಿ ಸಂಜೆ ಬಿರುಸಿನ ಮಳೆ ಸುರಿಯಿತು. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಮುಲ್ಲಾಮಾರಿ ಮತ್ತು ಅದರ ಉಪನದಿಗಳು ತುಂಬಿ ಹರಿದಿವೆ. </p>.<p>ಕೊಪ್ಪಳ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದೆ. ಉತ್ತಮ ಮಳೆಯಾಗಿ ಕೊಪ್ಪಳ ತಾಲ್ಲೂಕಿನಲ್ಲಿರುವ ಹಿರೇಹಳ್ಳ ಜಲಾಶಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಬಂದಿದ್ದು, ಜಲಾಶಯದಿಂದ ಹೊರಗೆ ನೀರು ಹರಿಸಿದ ಪರಿಣಾಮ ಬೆಳೆಗಳು ಕೊಚ್ಚಿ ಹೋಗಿವೆ.</p>.<p>ತಾಲ್ಲೂಕಿನ ಹಿರೇಸಿಂಧೋಗಿ ಹಾಗೂ ಮುದ್ಲಾಪುರ ಬಳಿ ಮೆಕ್ಕಜೋಳ ಬೆಳೆದಿದ್ದ ಹೊಲಗಳಿಗೆ ನೀರು ನುಗ್ಗಿತು. ಹೊಲಗಳಿಗೆ ನುಗ್ಗಿದ ಕಳೆ ತೆಗೆದು ಹಾಕಲು ರೈತರು ಸಾಕಷ್ಟು ಶ್ರಮಿಸಿದರು. ಮಳೆ ಹೆಚ್ಚಳವಾಗಿದ್ದರಿಂದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಮಳೆ ಆಗಾಗ ಸುರಿಯುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿದಿದ್ದು, ಮಧ್ಯಾಹ್ನ ಜೋರಾಯಿತು.</p>.<p>ರಾಯಚೂರು, ಸಿಂಧನೂರು ಹಾಗೂ ದೇವದುರ್ಗ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಶನಿವಾರ ಭಾರಿ ಸುರಿದಿದೆ. ನದಿಗಳು ಉಕ್ಕಿಹರಿಯುತ್ತಿದ್ದು, ಜಲಾಶಯಗಳಿಂದ ಹೊರಹರಿವಿನ ಪ್ರಮಾಣ ಹೆಚ್ಚಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.</p>.<p>ಕಲಬುರಗಿ ನಗರದಲ್ಲಿ ಸಂಜೆ ಬಿರುಸಿನ ಮಳೆ ಸುರಿಯಿತು. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಮುಲ್ಲಾಮಾರಿ ಮತ್ತು ಅದರ ಉಪನದಿಗಳು ತುಂಬಿ ಹರಿದಿವೆ. </p>.<p>ಕೊಪ್ಪಳ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದೆ. ಉತ್ತಮ ಮಳೆಯಾಗಿ ಕೊಪ್ಪಳ ತಾಲ್ಲೂಕಿನಲ್ಲಿರುವ ಹಿರೇಹಳ್ಳ ಜಲಾಶಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಬಂದಿದ್ದು, ಜಲಾಶಯದಿಂದ ಹೊರಗೆ ನೀರು ಹರಿಸಿದ ಪರಿಣಾಮ ಬೆಳೆಗಳು ಕೊಚ್ಚಿ ಹೋಗಿವೆ.</p>.<p>ತಾಲ್ಲೂಕಿನ ಹಿರೇಸಿಂಧೋಗಿ ಹಾಗೂ ಮುದ್ಲಾಪುರ ಬಳಿ ಮೆಕ್ಕಜೋಳ ಬೆಳೆದಿದ್ದ ಹೊಲಗಳಿಗೆ ನೀರು ನುಗ್ಗಿತು. ಹೊಲಗಳಿಗೆ ನುಗ್ಗಿದ ಕಳೆ ತೆಗೆದು ಹಾಕಲು ರೈತರು ಸಾಕಷ್ಟು ಶ್ರಮಿಸಿದರು. ಮಳೆ ಹೆಚ್ಚಳವಾಗಿದ್ದರಿಂದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಮಳೆ ಆಗಾಗ ಸುರಿಯುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿದಿದ್ದು, ಮಧ್ಯಾಹ್ನ ಜೋರಾಯಿತು.</p>.<p>ರಾಯಚೂರು, ಸಿಂಧನೂರು ಹಾಗೂ ದೇವದುರ್ಗ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>