ಖಾಲಿ ಕೈಯಲ್ಲಿ ಹೋದರೆ ಏನೂ ಆಗಲ್ಲ: ಭೂಕಂಪನ ಪೀಡಿತ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡದಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಖಾಲಿ ಕೈಯಲ್ಲಿ ಅಲ್ಲಿಗೆ ಹೋದರೆ ಏನೂ ಸಾಧಿಸಿದಂತಾಗುವುದಿಲ್ಲ. ನಾನು ಅಲ್ಲಿಗೆ ಭೇಟಿ ನೀಡದೇ ಇದ್ದರೂ ನಿರಂತರವಾಗಿ ಮಾಹಿತಿಯನ್ನು ತರಿಸಿಕೊಂಡಿದ್ದೇನೆ. ಸಂಸದರು, ಶಾಸಕರು ಅಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಅವರ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶೀಘ್ರ ನಾನೂ ಭೇಟಿ ಕೊಡುತ್ತೇನೆ ಎಂದರು.