‘30ರಂದು ಬೆಳಿಗ್ಗೆ 10.30ಕ್ಕೆ ಬಸವಕಲ್ಯಾಣ ಅಲ್ಲಮಪ್ರಭು ಶೂನ್ಯಪೀಠದ ಅಧ್ಯಕ್ಷ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ನೇತೃತ್ವ, ಮಹಾರಾಷ್ಟ್ರದ ಅಲ್ಲಮಗಿರಿ ಅಲ್ಲಮಪ್ರಭು ಯೋಗಪೀಠದ ಅಧ್ಯಕ್ಷ ಬಸವಕುಮಾರ ಸ್ವಾಮೀಜಿ, ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ, ಬಸವಕಲ್ಯಾಣದ ಬಸವ ಮಹಾಮನೆಯ ಬಸವಪ್ರಭು ಸ್ವಾಮೀಜಿ ಅವರು ಸಮ್ಮುಖ ವಹಿಸಲಿದ್ದಾರೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ಬೀದರ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತ್ ಚಿದ್ರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲ್ಯಾಣಪರ್ವ ಸ್ವಾಗತ ಸಮಿತಿ ಅಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಹೇಳಿದರು.