ಕೇವಲ ಮುಖಂಡರ ಮೇಲೆ ಭರವಸೆ ಇಟ್ಟು ಕುಳಿತರೆ ಮತ ಸೆಳೆಯಲು ಸಾಧ್ಯವಿಲ್ಲ ಎಂದು ಅರಿತ ಸಚಿವ ಪ್ರಿಯಾಂಕ್ ಖರ್ಗೆ ಖುದ್ದು ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಬೂತ್ ಮಟ್ಟದಲ್ಲಿ 10ರಿಂದ 15 ಜನ ಕಾರ್ಯಕರ್ತರ ಹೆಸರು, ಮೊಬೈಲ್ ನಂಬರ್ ಕಲೆ ಹಾಕಲಾಗುತ್ತಿದೆ. ಇದರಲ್ಲಿ ಬೂತ್ನಲ್ಲಿರುವ ಎಲ್ಲ ಜಾತಿ, ಜನಾಂಗ, ಧರ್ಮದವರು ಸೇರಿದಂತೆ ಬೇರೆ ಪಕ್ಷದವರ ಹೆಸರನ್ನೂ ಸಂಗ್ರಹಿಸುವಂತೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.