<p><strong>ವಾಡಿ:</strong> ಪಟ್ಟಣದ ಬಲರಾಮ ಚೌಕ್ನಿಂದ ಕಮರವಾಡಿ, ಆಲೂರು, ಸೂಲಹಳ್ಳಿ, ಕರದಳ್ಳಿ ಹಾಗೂ ಬೊಮ್ಮನಹಳ್ಳಿ ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.</p>.<p>ಡಾಂಬರ್ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ನಿತ್ಯ ನರಕದ ಅನುಭವ ನೀಡುತ್ತಿವೆ.</p>.<p>ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿದ್ದಾಗ ಬಲರಾಮ ಚೌಕ್ನಿಂದ ಕಮರವಾಡಿ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿತ್ತು. ರಸ್ತೆ ನಿರ್ಮಾಣ ಸಮಯದಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ತೋರಿದ್ದರಿಂದ ಗುಣಮಟ್ಟದ ಕಾಮಗಾರಿ ನಡೆದಿಲ್ಲ. ಕಳಪೆ ಕಾಮಗಾರಿಯಿಂದ ರಸ್ತೆ ಮತ್ತೆ ಹದಗೆಟ್ಟಿದೆ ಎಂದು ದೂರುತ್ತಾರೆ ಸ್ಥಳೀಯರು.</p>.<p>ಡಾಂಬರೀಕರಣಗೊಂಡ ರಸ್ತೆಗಳು ಈಗ ತಗ್ಗುಗುಂಡಿಗಳಿಂದ ತುಂಬಿ ಹೋಗಿದ್ದು, ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿ ನಿಂತಿವೆ. ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಕೆಕೆಆರ್ಡಿಬಿ ಹಾಗೂ ಭೂಸೇನಾ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುತ್ತಾರೆ ಅವರು.</p>.<p>ಈಚೆಗೆ ಸುರಿದ ಮಳೆಯಿಂದ ರಸ್ತೆ ಮತ್ತಷ್ಟು ಹಾಳಾಗಿದ್ದು, ಇದನ್ನೇ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಳಪೆ ಕಾಮಗಾರಿ ಆರೋಪ ಮರೆಮಾಚಲು ಕುಂಟು ನೆಪ ಹೇಳುತ್ತಿದ್ದಾರೆ.</p>.<p>ಬಸವನಖಣಿ, ಕಮರವಾಡಿ, ಸೂಲಹಳ್ಳಿ ಸಮೀಪ ರಸ್ತೆಗೆ ಹೊಂದಿಕೊಂಡು ನೂರಾರು ಕಲ್ಲು ಗಣಿಗಳಿವೆ. ಸತತ ಮಳೆಗೆ ಕಲ್ಲುಗಣಿಗಳು ನೀರಿನಿಂದ ಜಲಾವೃತಗೊಂಡಿದ್ದು, ಸಂಗ್ರಹಗೊಂಡ ನೀರನ್ನು ಪೈಪುಗಳ ಮೂಲಕ ರಸ್ತೆಗೆ ಹರಿಬಿಡಲಾಗುತ್ತಿದೆ. ಈ ನೀರು ರಸ್ತೆಯ ಮೇಲಿನ ತಗ್ಗುಗಳಲ್ಲಿ ಸಂಗ್ರಹಗೊಳ್ಳುತ್ತಿವೆ. ಇದು ಸಹ ರಸ್ತೆ ಹಾಳಾಗಲು ಕಾರಣವಾಗಿದೆ.</p>.<p>ರಸ್ತೆಯ ತಗ್ಗುಗಳಲ್ಲಿ ನಿಂತ ನೀರು ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ. ರಸ್ತೆ ನಿರ್ಮಾಣ ಹಾಗೂ ದುರಸ್ತಿ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿದ ತಪ್ಪಿತಸ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಮನವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಪಟ್ಟಣದ ಬಲರಾಮ ಚೌಕ್ನಿಂದ ಕಮರವಾಡಿ, ಆಲೂರು, ಸೂಲಹಳ್ಳಿ, ಕರದಳ್ಳಿ ಹಾಗೂ ಬೊಮ್ಮನಹಳ್ಳಿ ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.</p>.<p>ಡಾಂಬರ್ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ನಿತ್ಯ ನರಕದ ಅನುಭವ ನೀಡುತ್ತಿವೆ.</p>.<p>ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿದ್ದಾಗ ಬಲರಾಮ ಚೌಕ್ನಿಂದ ಕಮರವಾಡಿ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿತ್ತು. ರಸ್ತೆ ನಿರ್ಮಾಣ ಸಮಯದಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ತೋರಿದ್ದರಿಂದ ಗುಣಮಟ್ಟದ ಕಾಮಗಾರಿ ನಡೆದಿಲ್ಲ. ಕಳಪೆ ಕಾಮಗಾರಿಯಿಂದ ರಸ್ತೆ ಮತ್ತೆ ಹದಗೆಟ್ಟಿದೆ ಎಂದು ದೂರುತ್ತಾರೆ ಸ್ಥಳೀಯರು.</p>.<p>ಡಾಂಬರೀಕರಣಗೊಂಡ ರಸ್ತೆಗಳು ಈಗ ತಗ್ಗುಗುಂಡಿಗಳಿಂದ ತುಂಬಿ ಹೋಗಿದ್ದು, ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿ ನಿಂತಿವೆ. ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾದ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಕೆಕೆಆರ್ಡಿಬಿ ಹಾಗೂ ಭೂಸೇನಾ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುತ್ತಾರೆ ಅವರು.</p>.<p>ಈಚೆಗೆ ಸುರಿದ ಮಳೆಯಿಂದ ರಸ್ತೆ ಮತ್ತಷ್ಟು ಹಾಳಾಗಿದ್ದು, ಇದನ್ನೇ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಳಪೆ ಕಾಮಗಾರಿ ಆರೋಪ ಮರೆಮಾಚಲು ಕುಂಟು ನೆಪ ಹೇಳುತ್ತಿದ್ದಾರೆ.</p>.<p>ಬಸವನಖಣಿ, ಕಮರವಾಡಿ, ಸೂಲಹಳ್ಳಿ ಸಮೀಪ ರಸ್ತೆಗೆ ಹೊಂದಿಕೊಂಡು ನೂರಾರು ಕಲ್ಲು ಗಣಿಗಳಿವೆ. ಸತತ ಮಳೆಗೆ ಕಲ್ಲುಗಣಿಗಳು ನೀರಿನಿಂದ ಜಲಾವೃತಗೊಂಡಿದ್ದು, ಸಂಗ್ರಹಗೊಂಡ ನೀರನ್ನು ಪೈಪುಗಳ ಮೂಲಕ ರಸ್ತೆಗೆ ಹರಿಬಿಡಲಾಗುತ್ತಿದೆ. ಈ ನೀರು ರಸ್ತೆಯ ಮೇಲಿನ ತಗ್ಗುಗಳಲ್ಲಿ ಸಂಗ್ರಹಗೊಳ್ಳುತ್ತಿವೆ. ಇದು ಸಹ ರಸ್ತೆ ಹಾಳಾಗಲು ಕಾರಣವಾಗಿದೆ.</p>.<p>ರಸ್ತೆಯ ತಗ್ಗುಗಳಲ್ಲಿ ನಿಂತ ನೀರು ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ. ರಸ್ತೆ ನಿರ್ಮಾಣ ಹಾಗೂ ದುರಸ್ತಿ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿದ ತಪ್ಪಿತಸ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಮನವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>