ಬಸವನಖಣಿ, ಕಮರವಾಡಿ, ಸೂಲಹಳ್ಳಿ ಸಮೀಪ ರಸ್ತೆಗೆ ಹೊಂದಿಕೊಂಡು ನೂರಾರು ಕಲ್ಲು ಗಣಿಗಳಿವೆ. ಸತತ ಮಳೆಗೆ ಕಲ್ಲುಗಣಿಗಳು ನೀರಿನಿಂದ ಜಲಾವೃತಗೊಂಡಿದ್ದು, ಸಂಗ್ರಹಗೊಂಡ ನೀರನ್ನು ಪೈಪುಗಳ ಮೂಲಕ ರಸ್ತೆಗೆ ಹರಿಬಿಡಲಾಗುತ್ತಿದೆ. ಈ ನೀರು ರಸ್ತೆಯ ಮೇಲಿನ ತಗ್ಗುಗಳಲ್ಲಿ ಸಂಗ್ರಹಗೊಳ್ಳುತ್ತಿವೆ. ಇದು ಸಹ ರಸ್ತೆ ಹಾಳಾಗಲು ಕಾರಣವಾಗಿದೆ.