ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕನಕದಾಸ ಜಯಂತ್ಯುತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ‘ಕನಕದಾಸರು ಕರ್ನಾಟಕದಲ್ಲಿ ಹೊಸ ಬಂಡಾಯ ಹುಟ್ಟುಹಾಕಿದರು. ಅವರ ರಾಮಧಾನ್ಯ ಕೃತಿಯು ಕನ್ನಡ ನಾಡಿನ ದುಡಿಯುವ ವರ್ಗದ ಶ್ರೇಷ್ಠತೆ ಮತ್ತು ಅನ್ನದ ಚರಿತೆ ಕಟ್ಟಿಕೊಡುತ್ತದೆ. ಉಡುಪಿಯ ಶ್ರೀಕೃಷ್ಣನ ಕುರಿತು ಪ್ರಶ್ನಾತ್ಮಕವಾಗಿ ವೈಚಾರಿಕ ಸಂಬಂಧ ಕಟ್ಟಿದಾತ ಕನಕದಾಸರು. 15-16ನೇ ಶತಮಾನದ ಕಾಲಮಾನದಲ್ಲಿ ಬದುಕಿದ ಕನಕದಾಸರು, ವೈಷ್ಣವ ದಾಸಪಂಥದ ಜೊತೆಗೆ ಗುರುತಿಸಿಕೊಂಡು ಮಾನವೀಯ ಮೌಲ್ಯ ರೂಪಿಸಿದರು’ ಎಂದರು.