ಕಲಬುರ್ಗಿ: 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನೆಹರೂ ಗಂಜ್ನ ನಗರೇಶ್ವರ ಶಾಲೆಯಿಂದ ಹಮ್ಮಿಕೊಂಡಿದ್ದ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.
ಸಮ್ಮೇಳನದ ಸರ್ವಾಧ್ಯಕ್ಷೆ ಡಾ. ನಾಗಾಬಾಯಿ ಬುಳ್ಳಾ, ಸಚಿವ ಪ್ರಿಯಾಂಕ್, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಅಲಂಕೃತ ಸಾರೋಟಿನಲ್ಲಿ ಸಾಗಿ ನೆರೆದ ಸಾಹಿತ್ಯಾಭಿಮಾನಿಗಳತ್ತ ಕೈ ಬೀಸಿದರು.