ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕಾರಜೋಳ

Last Updated 17 ಅಕ್ಟೋಬರ್ 2019, 4:26 IST
ಅಕ್ಷರ ಗಾತ್ರ

ಕಲಬುರ್ಗಿ: ಡಿಸೆಂಬರ್ ನಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಜನವರಿಯಲ್ಲಿ ಕಲಬುರ್ಗಿಯಲ್ಲಿ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಗಳು ಬಂದರೆ ಅಧಿಕಾರಿಗಳು ಆ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಚುನಾವಣೆ ‌ಬಳಿಕ‌ ನಡೆದರೆ ಅತ್ಯಂತ ವ್ಯವಸ್ಥಿತವಾಗಿ ಅದ್ಧೂರಿಯಾಗಿ ‌ನಡೆಸಬಹುದು ಎಂದು ಹೇಳಿದರು. ಇತ್ತೀಚೆಗೆ ನನ್ನನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ ಅವರಿಗೂ ತಿಳಿಸಿದ್ದೇನೆ ಎಂದು ಹೇಳಿದರು.

₹ 1200 ಕೋಟಿಯನ್ನು ನೆರೆಗಾಗಿ ಮಧ್ಯಂತರ ಪರಿಹಾರ ನೀಡಲಾಗಿದೆ. ಇನ್ನಷ್ಟು ಪರಿಹಾರ ಕೇಂದ್ರದಿಂದ ಬರಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT