ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಗಳು ಬಂದರೆ ಅಧಿಕಾರಿಗಳು ಆ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಚುನಾವಣೆ ಬಳಿಕ ನಡೆದರೆ ಅತ್ಯಂತ ವ್ಯವಸ್ಥಿತವಾಗಿ ಅದ್ಧೂರಿಯಾಗಿ ನಡೆಸಬಹುದು ಎಂದು ಹೇಳಿದರು. ಇತ್ತೀಚೆಗೆ ನನ್ನನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ ಅವರಿಗೂ ತಿಳಿಸಿದ್ದೇನೆ ಎಂದು ಹೇಳಿದರು.