<p><strong>ಕಲಬುರ್ಗಿ: </strong>85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದ್ದು,ವಿವಿಧ ಜಿಲ್ಲೆಗಳಿಂದ ಬಂದಿರುವ ಸಾಹಿತ್ಯಾಸಕ್ತರು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ನೋಂದಣಿ ಪ್ರಕ್ರಿಯೆಗಾಗಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.</p>.<p>ನೋಂದಣಿ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಸಮ್ಮೇಳನದ ವಿವಿಧ ಘಟಕಗಳು ಅಧಿಕಾರಿಗಳು ಮತ್ತು ಸ್ವಯಂಸೇವಕರು ಕಿಟ್ ವಿತರಣೆ ಮಾಡಿದರು.</p>.<p>ಸಮ್ಮೇಳನದ ಮುನ್ನಾ ದಿನವೇ ಕಿಟ್, ಒಒಡಿ ಆರ್ಡರ್ ಪ್ರತಿ, ಆಹ್ವಾನ ಪತ್ರಿಕೆ ಎಲ್ಲವೂ ನೀಡಬೇಕಿತ್ತು. ಈವರೆಗೆ ನೀಡಿಲ್ಲ ಎಂದು ಯಾದಗಿರಿ ಜಿಲ್ಲೆಯ ಶಹಾಪುರ ಸಾಹಿತಿ ರಾಘವೇಂದ್ರ ಹಾರಣಗೇರಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೇರೆ ಬೇರೆ ಜಿಲ್ಲೆಗಳಲ್ಲಿ ಸಮ್ಮೇಳನ ನಡೆದ ಸಂದರ್ಭದಲ್ಲಿ ಬೇಗನೇ ವಿತರಣೆ ಮಾಡಲಾಗುತ್ತಿದ್ದು, ಆದರೆ ಇಲ್ಲಿ ಮಾತ್ರ ವಿಳಂಬ ಮಾಡಲಾಗುತ್ತಿದೆ ಎಂದು ಸಂಘಸಂಸ್ಥೆಗಳ ಪ್ರತಿನಿಧಿಗಳು ಆರೋಪಿಸಿದರು.</p>.<p>‘ನಾವು ಮೈಸೂರು ಜಿಲ್ಲೆಯಿಂದ ಬಂದಿದ್ದೇವೆ. ನಸುಕಿನ 5.30ರಿಂದ ಇಲ್ಲಿ ಕಾಯುತ್ತಿದ್ದೇವೆ. ಆದರೆ ಇಲ್ಲಿನ ಮೈಸೂರು ಜಿಲ್ಲೆಯ ಕೌಂಟರಿನಲ್ಲಿ ಯಾರೂ ಸಹ ಇಲ್ಲ’ ಎಂದು ಮೈಸೂರಿನ ವಿವಿಧ ಸಂಘಟನೆಯ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಕರ ವಿರುದ್ಧ ಘೋಷಣೆ ಹಾಕಿದರು. ‘ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ತೋರಲಾಗಿದೆ. ಹೀಗೆ ನಿರಾಸಕ್ತಿ ಮುಂದುವರೆದಲ್ಲಿ, ಪ್ರವೇಶದ್ವಾರದ ಬಳಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದ್ದು,ವಿವಿಧ ಜಿಲ್ಲೆಗಳಿಂದ ಬಂದಿರುವ ಸಾಹಿತ್ಯಾಸಕ್ತರು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ನೋಂದಣಿ ಪ್ರಕ್ರಿಯೆಗಾಗಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.</p>.<p>ನೋಂದಣಿ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಸಮ್ಮೇಳನದ ವಿವಿಧ ಘಟಕಗಳು ಅಧಿಕಾರಿಗಳು ಮತ್ತು ಸ್ವಯಂಸೇವಕರು ಕಿಟ್ ವಿತರಣೆ ಮಾಡಿದರು.</p>.<p>ಸಮ್ಮೇಳನದ ಮುನ್ನಾ ದಿನವೇ ಕಿಟ್, ಒಒಡಿ ಆರ್ಡರ್ ಪ್ರತಿ, ಆಹ್ವಾನ ಪತ್ರಿಕೆ ಎಲ್ಲವೂ ನೀಡಬೇಕಿತ್ತು. ಈವರೆಗೆ ನೀಡಿಲ್ಲ ಎಂದು ಯಾದಗಿರಿ ಜಿಲ್ಲೆಯ ಶಹಾಪುರ ಸಾಹಿತಿ ರಾಘವೇಂದ್ರ ಹಾರಣಗೇರಾ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೇರೆ ಬೇರೆ ಜಿಲ್ಲೆಗಳಲ್ಲಿ ಸಮ್ಮೇಳನ ನಡೆದ ಸಂದರ್ಭದಲ್ಲಿ ಬೇಗನೇ ವಿತರಣೆ ಮಾಡಲಾಗುತ್ತಿದ್ದು, ಆದರೆ ಇಲ್ಲಿ ಮಾತ್ರ ವಿಳಂಬ ಮಾಡಲಾಗುತ್ತಿದೆ ಎಂದು ಸಂಘಸಂಸ್ಥೆಗಳ ಪ್ರತಿನಿಧಿಗಳು ಆರೋಪಿಸಿದರು.</p>.<p>‘ನಾವು ಮೈಸೂರು ಜಿಲ್ಲೆಯಿಂದ ಬಂದಿದ್ದೇವೆ. ನಸುಕಿನ 5.30ರಿಂದ ಇಲ್ಲಿ ಕಾಯುತ್ತಿದ್ದೇವೆ. ಆದರೆ ಇಲ್ಲಿನ ಮೈಸೂರು ಜಿಲ್ಲೆಯ ಕೌಂಟರಿನಲ್ಲಿ ಯಾರೂ ಸಹ ಇಲ್ಲ’ ಎಂದು ಮೈಸೂರಿನ ವಿವಿಧ ಸಂಘಟನೆಯ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಕರ ವಿರುದ್ಧ ಘೋಷಣೆ ಹಾಕಿದರು. ‘ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ತೋರಲಾಗಿದೆ. ಹೀಗೆ ನಿರಾಸಕ್ತಿ ಮುಂದುವರೆದಲ್ಲಿ, ಪ್ರವೇಶದ್ವಾರದ ಬಳಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>