ಚಿತ್ತಾಪುರ: ‘ಕನ್ನಡ ಸಾಹಿತ್ಯ ಲೋಕದಲ್ಲಿ ಉತ್ತಮ ಸಾಹಿತ್ಯ ರಚನೆಯ ಮೂಲಕ ಕನ್ನಡಿಗರ ಮನದಲ್ಲಿ ಮನೆ ಮಾಡಿರುವ ಸಾಹಿತಿ ಡಾ.ಚನ್ನವೀರ ಕಣವಿ ಅವರು ಇಂದಿನ ಹೊಸ ಪೀಳಿಗೆಯ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದಾರೆ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರೇಂದ್ರ ಕೊಲ್ಲೂರ್ ಹೇಳಿದರು.
ಪಟ್ಟಣದ ಪ್ರಾರ್ಥನಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಸಾಪದಿಂದ ಆಯೋಜಿಸಿದ್ದ ಡಾ.ಚನ್ನವೀರ ಕಣವಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.