ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪಾಸ್ ಮಾಡಿರುವ ಕಾರ್ಮಿಕ ವಿರೋಧಿಯಾದ ಕಾರ್ಪೊರೇಟ್ ಬಂಡವಾಳ ಪರವಾದ ಕಾರ್ಮಿಕ ಕಾನೂನುಗಳ ತಿದ್ದುಪಡಿಯ ನಾಲ್ಕು ಸಂಹಿತೆಗಳಾದ ಕೈಗಾರಿಕಾ ಸಂಬಂಧಗಳ ಸಂಹಿತೆ, ವೃತ್ತಿ ಆಧಾರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಸಾಮಾಜಿಕ ಭದ್ರತಾ ಮಸೂದೆಗಳು ಹಾಗೂ ಈಗಾಗಲೇ ರೂಪಿಸಿರುವ ವೇತನ ಸಂಹಿತೆಯನ್ನೂ ವಾಪಸ್ ಪಡೆಯಬೇಕು ಎಂದೂ ಒತ್ತಾಯಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ, ರೈತ ಕೃಷಿ ಕಾರ್ಮಿಕರ ಸಂಘಟನೆ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ನವನಿರ್ಮಾಣ ಸೇನೆ ಸೇರಿದಂತೆ ಹಲವು ಸಂಘಟನೆಗಳು ಬಂದ್ ನಲ್ಲಿ ಭಾಗವಹಿಸಿವೆ.