<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong> ಕೇಂದ್ರ ಸರ್ಕಾರ ರೈತರ ಹಿತ ಕಾಯುವ ಬದಲು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಅಂಬಾನಿ, ಅದಾನಿ ಪರ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಾ.ಶರಣ ಪ್ರಕಾಶ ಪಾಟೀಲ ಆರೋಪಿಸಿದರು.</p>.<p>ಸೇಡಂನಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷ ಆಯೋಜಿಸಿದ್ಧ ಕಿಸಾನ್ ಮಜದೂರ್ ದಿನಾಚರಣೆ ಪಾದಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ಮೂಲಕ ರೈತರನ್ನು ಮತ್ತು ಕಾರ್ಮಿಕರನ್ನು ನಿರ್ಲಕ್ಷಿಸುತ್ತಿದೆ. ಇದರಿಂದ ದೇಶದ ರೈತರಿಗೆ ಮುಂದಿನ ದಿನಗಲ್ಲಿ ಬಹುದೊಡ್ಡ ಪೆಟ್ಟು ಬೀಳಲಿದ್ದು ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ ಎಂದರು.</p>.<p>ಸೇಡಂನ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಪಾದಯಾತ್ರೆ ಆರಂಭಿಸಿ ಊಡಗಿ ಕ್ರಾಸ್, ಕಲಬುರ್ಗಿ ಕ್ರಾಸ್, ಬಸ್ ನಿಲ್ದಾಣ, ಮುಖ್ಯರಸ್ತೆ ಮಾರ್ಗದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು.</p>.<p>ಪಾದಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟಿಸಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ವಿಶ್ವನಾಥ ಪಾಟೀಲ ಬೊಮ್ಮನಳ್ಳಿ, ರಾಜಶೇಖರ ಪುರಾಣಿಕ್, ಅನಂತಯ್ಯ ಮುಸ್ತಾಜರ್, ಅಬ್ದುಲ್ ಗಫೂರ್, ಸಂತೋಷ ತಳವಾರ, ಸತೀಶರೆಡ್ಡಿ ರಂಜೋಳ, ರುದ್ರು ಪಿಲ್ಲಿ ವೆಂಕಟಪ್ಪ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong> ಕೇಂದ್ರ ಸರ್ಕಾರ ರೈತರ ಹಿತ ಕಾಯುವ ಬದಲು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಅಂಬಾನಿ, ಅದಾನಿ ಪರ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಾ.ಶರಣ ಪ್ರಕಾಶ ಪಾಟೀಲ ಆರೋಪಿಸಿದರು.</p>.<p>ಸೇಡಂನಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷ ಆಯೋಜಿಸಿದ್ಧ ಕಿಸಾನ್ ಮಜದೂರ್ ದಿನಾಚರಣೆ ಪಾದಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ಮೂಲಕ ರೈತರನ್ನು ಮತ್ತು ಕಾರ್ಮಿಕರನ್ನು ನಿರ್ಲಕ್ಷಿಸುತ್ತಿದೆ. ಇದರಿಂದ ದೇಶದ ರೈತರಿಗೆ ಮುಂದಿನ ದಿನಗಲ್ಲಿ ಬಹುದೊಡ್ಡ ಪೆಟ್ಟು ಬೀಳಲಿದ್ದು ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ ಎಂದರು.</p>.<p>ಸೇಡಂನ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಪಾದಯಾತ್ರೆ ಆರಂಭಿಸಿ ಊಡಗಿ ಕ್ರಾಸ್, ಕಲಬುರ್ಗಿ ಕ್ರಾಸ್, ಬಸ್ ನಿಲ್ದಾಣ, ಮುಖ್ಯರಸ್ತೆ ಮಾರ್ಗದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ನಡೆಯಿತು.</p>.<p>ಪಾದಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟಿಸಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ವಿಶ್ವನಾಥ ಪಾಟೀಲ ಬೊಮ್ಮನಳ್ಳಿ, ರಾಜಶೇಖರ ಪುರಾಣಿಕ್, ಅನಂತಯ್ಯ ಮುಸ್ತಾಜರ್, ಅಬ್ದುಲ್ ಗಫೂರ್, ಸಂತೋಷ ತಳವಾರ, ಸತೀಶರೆಡ್ಡಿ ರಂಜೋಳ, ರುದ್ರು ಪಿಲ್ಲಿ ವೆಂಕಟಪ್ಪ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>