<p><strong>ಕಲಬುರ್ಗಿ:</strong> 2014ರಲ್ಲಿ ಕಲಬುರ್ಗಿಯಲ್ಲಿ ರೈಲ್ವೆ ವಿಭಾಗವನ್ನು ಸ್ಥಾಪಿಸುವ ಕುರಿತು ಮಾಡಿದ್ದ ಘೋಷಣೆಯನ್ನು ರದ್ದುಗೊಳಿಸಿದ ಕ್ರಮವನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಸೊಲ್ಲಾಪುರ ಮತ್ತು ಸಿಕಂದರಾಬಾದ ರೈಲ್ವೆ ವಿಭಾಗಗಳಲ್ಲಿ ಹಂಚಿ ಹೋಗಿರುವ ಕಲಬುರ್ಗಿ ವಿಭಾಗ ಈ ಎರಡೂ ವಿಭಾಗಗಳಿಗೆ ಅತ್ಯಂತ ಹೆಚ್ಚು ಆದಾಯ ತಂದುಕೊಡುವ ಕೇಂದ್ರ ಸ್ಥಾನವೂ ಹೌದು. ಕಲ್ಯಾಣ ಕರ್ನಾಟಕದ ಪ್ರಮುಖ ಆರ್ಥಿಕ ಮತ್ತು ವಾಣಿಜ್ಯ ನಗರಿಯಾಗಿರುವ ಕಲಬುರ್ಗಿಗೆ ತನ್ನದೇ ಆದ ಸ್ವತಂತ್ರ ಸಾಮರ್ಥ್ಯವಿದೆ’ ಎಂದರು.</p>.<p>‘ತೊಗರಿ, ಸಿಮೆಂಟ್ ಸೇರಿದಂತೆ ಹಲವು ವಾಣಿಜ್ಯ ವ್ಯಾಪಾರ ಮಾರುಕಟ್ಟೆಯ ಪ್ರಮುಖ ಸ್ಥಾನವಾದ ಕಲಬುರ್ಗಿಗೆ ಸಂವಿಧಾನದ 371 (ಜೆ) ವಿಧಿ ಈಗಾಗಲೇ ನೀಡಲಾಗಿದ್ದರೂ ಸರ್ಕಾರ ಮತ್ತು ಜನ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸ್ಥಾಪನೆ ಪ್ರಕ್ರಿಯೆ ಕೈತಪ್ಪಿದೆ’ ಎಂದರು.</p>.<p>‘ರೈಲ್ವೆ ವಲಯ ಕಚೇರಿಗೆ ಅಡಿಗಲ್ಲು ಸಮಾರಂಭ ಮಾಡಿದ ನಂತರವೂ ಅದನ್ನು ರದ್ದುಪಡಿಸಿದ್ದು ಯಾಕೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು. ಹಿಂದುಳಿದ ಹೆಸರಿನ ಹಣೆ ಪಟ್ಟಿಯಿಂದ ಈ ಭಾಗ ಹೊರತರುವ ಬದಲು ಹಣೆ ಪಟ್ಟಿಯ ಮೇಲೆ ಮೊಳೆ ಹೊಡೆದು ಶಾಶ್ವತ ಹಿಂದುಳಿಯುವಂತೆ ಮಾಡುತ್ತಿರುವ ಇಂಥಹ ರಾಜಕೀಯ ವ್ಯವಸ್ಥೆಯನ್ನು ನಾವು ಧಿಕ್ಕರಿಸುತ್ತೇವೆ’ ಎಂದರು.</p>.<p>‘ಸ್ವಾರ್ಥ ರಾಜಕೀಯ ಕಾರಣಗಳಿಗಾಗಿ ಈ ಯೋಜನೆ ಕೈಬಿಡಲು ನಾವು ಬಿಡುವುದಿಲ್ಲ. ಕೂಡಲೇ ರೈಲ್ವೆ ವಲಯ ಕಲಬುರ್ಗಿಯಲ್ಲಿಯೇ ಸ್ಥಾಪಿಸಲು ಒತ್ತಾಯಿಸುತ್ತೇವೆ. ಒಂದು ತಿಂಗಳೊಳಗಾಗಿ ರದ್ದು ಮಾಡಿರುವ ಆದೇಶ ಮರಳಿ ಪಡೆಯಬೇಕು’ ಎಂದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ದೇಗಾಂವ, ಮುಖಂಡರಾದ ಪ್ರಶಾಂತ್ ಮಠಪತಿ, ದಿಲೀಪ್ ಕಿರಸಾಳಗಿ, ಸಂತೋಷ್ ಪಾಟೀಲ, ಮಹಾಂತೇಶ ಹರವಾಳ, ಋಷಿ ಬೆನಕನಹಳ್ಳಿ, ಕವಿತಾ ದೇಗಾಂವ, ಶ್ರಿಶೈಲ ಕನ್ನಡಗಿ, ರವಿಂದ್ರ ಜಮಾದಾರ, ಭೀಮಾಶಂಕರ ಕೊರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> 2014ರಲ್ಲಿ ಕಲಬುರ್ಗಿಯಲ್ಲಿ ರೈಲ್ವೆ ವಿಭಾಗವನ್ನು ಸ್ಥಾಪಿಸುವ ಕುರಿತು ಮಾಡಿದ್ದ ಘೋಷಣೆಯನ್ನು ರದ್ದುಗೊಳಿಸಿದ ಕ್ರಮವನ್ನು ಖಂಡಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಸೊಲ್ಲಾಪುರ ಮತ್ತು ಸಿಕಂದರಾಬಾದ ರೈಲ್ವೆ ವಿಭಾಗಗಳಲ್ಲಿ ಹಂಚಿ ಹೋಗಿರುವ ಕಲಬುರ್ಗಿ ವಿಭಾಗ ಈ ಎರಡೂ ವಿಭಾಗಗಳಿಗೆ ಅತ್ಯಂತ ಹೆಚ್ಚು ಆದಾಯ ತಂದುಕೊಡುವ ಕೇಂದ್ರ ಸ್ಥಾನವೂ ಹೌದು. ಕಲ್ಯಾಣ ಕರ್ನಾಟಕದ ಪ್ರಮುಖ ಆರ್ಥಿಕ ಮತ್ತು ವಾಣಿಜ್ಯ ನಗರಿಯಾಗಿರುವ ಕಲಬುರ್ಗಿಗೆ ತನ್ನದೇ ಆದ ಸ್ವತಂತ್ರ ಸಾಮರ್ಥ್ಯವಿದೆ’ ಎಂದರು.</p>.<p>‘ತೊಗರಿ, ಸಿಮೆಂಟ್ ಸೇರಿದಂತೆ ಹಲವು ವಾಣಿಜ್ಯ ವ್ಯಾಪಾರ ಮಾರುಕಟ್ಟೆಯ ಪ್ರಮುಖ ಸ್ಥಾನವಾದ ಕಲಬುರ್ಗಿಗೆ ಸಂವಿಧಾನದ 371 (ಜೆ) ವಿಧಿ ಈಗಾಗಲೇ ನೀಡಲಾಗಿದ್ದರೂ ಸರ್ಕಾರ ಮತ್ತು ಜನ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸ್ಥಾಪನೆ ಪ್ರಕ್ರಿಯೆ ಕೈತಪ್ಪಿದೆ’ ಎಂದರು.</p>.<p>‘ರೈಲ್ವೆ ವಲಯ ಕಚೇರಿಗೆ ಅಡಿಗಲ್ಲು ಸಮಾರಂಭ ಮಾಡಿದ ನಂತರವೂ ಅದನ್ನು ರದ್ದುಪಡಿಸಿದ್ದು ಯಾಕೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು. ಹಿಂದುಳಿದ ಹೆಸರಿನ ಹಣೆ ಪಟ್ಟಿಯಿಂದ ಈ ಭಾಗ ಹೊರತರುವ ಬದಲು ಹಣೆ ಪಟ್ಟಿಯ ಮೇಲೆ ಮೊಳೆ ಹೊಡೆದು ಶಾಶ್ವತ ಹಿಂದುಳಿಯುವಂತೆ ಮಾಡುತ್ತಿರುವ ಇಂಥಹ ರಾಜಕೀಯ ವ್ಯವಸ್ಥೆಯನ್ನು ನಾವು ಧಿಕ್ಕರಿಸುತ್ತೇವೆ’ ಎಂದರು.</p>.<p>‘ಸ್ವಾರ್ಥ ರಾಜಕೀಯ ಕಾರಣಗಳಿಗಾಗಿ ಈ ಯೋಜನೆ ಕೈಬಿಡಲು ನಾವು ಬಿಡುವುದಿಲ್ಲ. ಕೂಡಲೇ ರೈಲ್ವೆ ವಲಯ ಕಲಬುರ್ಗಿಯಲ್ಲಿಯೇ ಸ್ಥಾಪಿಸಲು ಒತ್ತಾಯಿಸುತ್ತೇವೆ. ಒಂದು ತಿಂಗಳೊಳಗಾಗಿ ರದ್ದು ಮಾಡಿರುವ ಆದೇಶ ಮರಳಿ ಪಡೆಯಬೇಕು’ ಎಂದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ದೇಗಾಂವ, ಮುಖಂಡರಾದ ಪ್ರಶಾಂತ್ ಮಠಪತಿ, ದಿಲೀಪ್ ಕಿರಸಾಳಗಿ, ಸಂತೋಷ್ ಪಾಟೀಲ, ಮಹಾಂತೇಶ ಹರವಾಳ, ಋಷಿ ಬೆನಕನಹಳ್ಳಿ, ಕವಿತಾ ದೇಗಾಂವ, ಶ್ರಿಶೈಲ ಕನ್ನಡಗಿ, ರವಿಂದ್ರ ಜಮಾದಾರ, ಭೀಮಾಶಂಕರ ಕೊರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>