ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ನೀತಿ ಒಪ್ಪಿಕೊಂಡ ಬಳಿಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುವ ನಷ್ಟವನ್ನು 2022ರವರೆಗೂ ಭರ್ತಿ ಮಾಡಿಕೊಡಬೇಕು. ಆದರೆ, ರಾಜ್ಯಕ್ಕೆ ಬರಬೇಕಿರುವ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ ಗಣನೀಯವಾಗಿ ಇಳಿಕೆ ಮಾಡಿದ್ದಾರೆ. ಈ ಅನ್ಯಾಯಕ್ಕೆ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರೇ ಕಾರಣ' ಎಂದು ಹರಿಹಾಯ್ದರು.