ಕಲಬುರಗಿ: ಜಾತ್ಯತೀತ ಜನತಾದಳ ಪಕ್ಷವು ದುಡ್ಡನ್ನು ಆಧಾರವಾಗಿಸಿಕೊಂಡು ರಾಜಕೀಯ ಮಾಡುತ್ತಿಲ್ಲ. ಒಂದು ವರ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಜಲಧಾರೆ, ಪಂಚರತ್ನ ಕಾರ್ಯಕ್ರಮ ಮಾಡುತ್ತಿದ್ದು, ಇವುಗಳಿಗೆ ದುಡ್ಡು ಕೊಟ್ಟು ಜನರನ್ನು ಕರೆತರುತ್ತಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು.