‘ಡಾಲರ್ಸ್ ಕಾಲೊನಿ ಸಚಿವರು ಮಾಧ್ಯಮಗಳ ಮುಂದೆ ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡುವ ಬದಲು ಅಧಿಕಾರದ ಮದ ಹಾಗೂ ಧಮ್ಕಿ ಹಾಕುವ ದಾಟಿಯಲ್ಲಿ ಮಾತನಾಡಿದ್ದಾರೆ. ಸ್ವಾಮೀಜಿ ಬಗ್ಗೆ ಸಚಿವರ ಪದ ಬಳಕೆ ಖಂಡನೀಯ. ಸ್ವಾಮೀಜಿಯನ್ನು ರೌಡಿ, ಅವನು, ಇವನು ಎಂದು ಏಕವಚನದಲ್ಲಿ ನಿಂದಿಸಿದ ಪರಿ ನೋಡಿದರೆ ಸ್ವಾಮೀಜಿ ಬಗ್ಗೆ ಎಷ್ಟು ಭಯವಿದೆ ಎಂಬುವುದು ಸ್ಪಷ್ಟವಾಗುತ್ತದೆ. ವೈಯಕ್ತಿಕವಾಗಿ ನಿಂದಿಸಿ, ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ಆಪಾದಿಸಿದ್ದಾರೆ.