‘ರಾಜ್ಯಕ್ಕೆ 13 ಕೋಟಿ ಮಾನವ ದಿನಗಳು ದೊರೆತಿದ್ದವು. ಈಗ 12 ಕೋಟಿ ಮಾನವ ದಿನಗಳನ್ನು ಬಳಸಿದ್ದೇವೆ. ಮಾನವ ದಿನ ಸೃಜಿಸಲು ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಲ್ಲದು. ಅದನ್ನು ಕೇಂದ್ರ ಅನುಮೋದಿಸಬೇಕಾಗುತ್ತದೆ. ಬರಗಾಲ ಬಂದಾಗ, ನರೇಗಾ ಕೂಲಿ ದಿನ ಹೆಚ್ಚಿಸುವಂತೆ ದೆಹಲಿಗೆ ಹೋಗಿ ಅಧಿಕಾರಿಗಳನ್ನು ಭೇಟಿಯಾಗಿ ಐದು ಸಲ ಮನವಿ ಕೊಟ್ಟರೂ ಸ್ಪಂದಿಸಿಲ್ಲ’ ಎಂದು ದೂರಿದರು.