<figcaption>""</figcaption>.<p><strong>ಕಲಬುರ್ಗಿ: </strong>ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.</p>.<p>ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆಗಾಗಿ ಭಾನುವಾರ ಬಂದಿದ್ದ ವೇಳೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಅಶ್ವತ್ಥ ನಾರಾಯಣ ನನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ ಎಂದು ತೀರುಗೇಟು ನೀಡಿದರು.</p>.<p>ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.</p>.<div style="text-align:center"><figcaption>ಕಲಬುರ್ಗಿಯಿಂದ ಬೀದರ್ಗೆ ತೆರಳುವ ಮಾರ್ಗ ಮಧ್ಯೆ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಹಾನಿಗೀಡಾದ ಹೊಲವನ್ನು ವೀಕ್ಷಿಸಿದರು.</figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಲಬುರ್ಗಿ: </strong>ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.</p>.<p>ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆಗಾಗಿ ಭಾನುವಾರ ಬಂದಿದ್ದ ವೇಳೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಅಶ್ವತ್ಥ ನಾರಾಯಣ ನನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ ಎಂದು ತೀರುಗೇಟು ನೀಡಿದರು.</p>.<p>ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.</p>.<div style="text-align:center"><figcaption>ಕಲಬುರ್ಗಿಯಿಂದ ಬೀದರ್ಗೆ ತೆರಳುವ ಮಾರ್ಗ ಮಧ್ಯೆ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಹಾನಿಗೀಡಾದ ಹೊಲವನ್ನು ವೀಕ್ಷಿಸಿದರು.</figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>