<p><strong>ಅಫಜಲಪುರ (ಕಲಬುರಗಿ):</strong> ತಾಲ್ಲೂಕಿನಾದ್ಯಾಂತ ಭಾನುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಅಮರ್ಜಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತಾಲ್ಲೂಕಿನ ದಣ್ಣೂರ ಮತ್ತು ಮದರಾ ಬಿ. ಗ್ರಾಮಗಳ ನಡುವಣ ಸೇತುವೆ ಜಲಾವೃತಗೊಂಡಿದೆ.</p><p>ಈ ಸೇತುವೆ ಜಾಲಾವೃತಗೊಂಡಿದ್ದರಿಂದ ಗ್ರಾಮಸ್ಥರು, ರೈತರು, ನೌಕರರು, ಶಾಲಾ ಕಾಲೇಜಿನ ಮಕ್ಕಳು ತೊಂದರೆ ಅನುಭವಿಸಿದರು.</p><p>ಅಮರ್ಜಾ ನದಿಯು ಭೀಮಾ ನದಿಯ ಉಪನದಿ. ಗಾಣಗಾಪುರದ ಸಮೀಪದಲ್ಲಿ ಅಮರ್ಜಾ ನದಿಯು ಭೀಮಾ ನದಿಯನ್ನು ಸೇರುತ್ತದೆ. ಪ್ರತಿ ಮಳೆಗಾಲದಲ್ಲಿ ಮುಳುಗುವ ಈ ಸೇತುವೆಯನ್ನು ಎತ್ತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ (ಕಲಬುರಗಿ):</strong> ತಾಲ್ಲೂಕಿನಾದ್ಯಾಂತ ಭಾನುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಅಮರ್ಜಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತಾಲ್ಲೂಕಿನ ದಣ್ಣೂರ ಮತ್ತು ಮದರಾ ಬಿ. ಗ್ರಾಮಗಳ ನಡುವಣ ಸೇತುವೆ ಜಲಾವೃತಗೊಂಡಿದೆ.</p><p>ಈ ಸೇತುವೆ ಜಾಲಾವೃತಗೊಂಡಿದ್ದರಿಂದ ಗ್ರಾಮಸ್ಥರು, ರೈತರು, ನೌಕರರು, ಶಾಲಾ ಕಾಲೇಜಿನ ಮಕ್ಕಳು ತೊಂದರೆ ಅನುಭವಿಸಿದರು.</p><p>ಅಮರ್ಜಾ ನದಿಯು ಭೀಮಾ ನದಿಯ ಉಪನದಿ. ಗಾಣಗಾಪುರದ ಸಮೀಪದಲ್ಲಿ ಅಮರ್ಜಾ ನದಿಯು ಭೀಮಾ ನದಿಯನ್ನು ಸೇರುತ್ತದೆ. ಪ್ರತಿ ಮಳೆಗಾಲದಲ್ಲಿ ಮುಳುಗುವ ಈ ಸೇತುವೆಯನ್ನು ಎತ್ತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>