<p><strong>ಕಾಳಗಿ:</strong> ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಪ್ರಾರಂಭವಾದ ಗುಡುಗು, ಬಿರುಗಾಳಿ ಸಹಿತ ಮಳೆಯು ಬುಧವಾರವು ಮುಂದುವರೆದಿದ್ದು, ಕೆಲವೆಡೆ ನೀರಿನ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p><p>ತಾಲ್ಲೂಕಿನ ಚಿಂಚೋಳಿ (ಎಚ್), ಭೂತ್ಪೂರ-ರುದ್ನೂರ ಹಾದುಹೋಗುವ ಶಹಾಪುರ-ಶಿವರಾಂಪುರ ರಾಜ್ಯಹೆದ್ದಾರಿ ಸೇತುವೆ ಮೇಲೆ ನೀರು ಬಂದು ಮಂಗಳವಾರ, ಬುಧವಾರ ಕೆಲಕಾಲ ಸಂಚಾರ ಕಡಿತಗೊಂಡಿತ್ತು. ಅಲ್ಲದೆ ನೀರಿನ ರಭಸಕ್ಕೆ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಕೆಲ ಭಾಗ ಕೊಚ್ಚಿ ಹೋಗಿದೆ.</p><p>ಸೇಡಂ, ಕಾಳಗಿ, ಚಿಂಚೋಳಿ ಮತ್ತು ಕಲಬುರಗಿ ಮಾರ್ಗದ ಮೂಲಕ ಶಾಲಾ ಕಾಲೇಜು, ಆಸ್ಪತ್ರೆ ಮತ್ತು ದಿನನಿತ್ಯದ ಕೆಲಸಕ್ಕೆ ಹೋಗುವವರು ಸಂಚಾರ ಕಡಿತದಿಂದ ತೊಂದರೆ ಅನುಭವಿಸುವಂತಾಗಿದೆ.</p><p>‘ಸೇತುವೆ ಸುತ್ತಲಿನ ರುದ್ನೂರ, ಭೂತ್ಪೂರ, ಚಿಂತಪಳ್ಳಿ, ರಾಯಕೋಡ ರೈತರಿಗೆ ಸೇತುವೆ ಅತಿ ಅವಶ್ಯಕವಾಗಿದ್ದು, ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸಿ ಹೊಸದಾಗಿ ಸೇತುವೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಟಿಎಪಿಸಿಎಂಎಸ್ ನಿರ್ದೇಶಕ ಮಲ್ಲಿಕಾರ್ಜುನ ಕೊಡದೂರ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ:</strong> ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಪ್ರಾರಂಭವಾದ ಗುಡುಗು, ಬಿರುಗಾಳಿ ಸಹಿತ ಮಳೆಯು ಬುಧವಾರವು ಮುಂದುವರೆದಿದ್ದು, ಕೆಲವೆಡೆ ನೀರಿನ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p><p>ತಾಲ್ಲೂಕಿನ ಚಿಂಚೋಳಿ (ಎಚ್), ಭೂತ್ಪೂರ-ರುದ್ನೂರ ಹಾದುಹೋಗುವ ಶಹಾಪುರ-ಶಿವರಾಂಪುರ ರಾಜ್ಯಹೆದ್ದಾರಿ ಸೇತುವೆ ಮೇಲೆ ನೀರು ಬಂದು ಮಂಗಳವಾರ, ಬುಧವಾರ ಕೆಲಕಾಲ ಸಂಚಾರ ಕಡಿತಗೊಂಡಿತ್ತು. ಅಲ್ಲದೆ ನೀರಿನ ರಭಸಕ್ಕೆ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಕೆಲ ಭಾಗ ಕೊಚ್ಚಿ ಹೋಗಿದೆ.</p><p>ಸೇಡಂ, ಕಾಳಗಿ, ಚಿಂಚೋಳಿ ಮತ್ತು ಕಲಬುರಗಿ ಮಾರ್ಗದ ಮೂಲಕ ಶಾಲಾ ಕಾಲೇಜು, ಆಸ್ಪತ್ರೆ ಮತ್ತು ದಿನನಿತ್ಯದ ಕೆಲಸಕ್ಕೆ ಹೋಗುವವರು ಸಂಚಾರ ಕಡಿತದಿಂದ ತೊಂದರೆ ಅನುಭವಿಸುವಂತಾಗಿದೆ.</p><p>‘ಸೇತುವೆ ಸುತ್ತಲಿನ ರುದ್ನೂರ, ಭೂತ್ಪೂರ, ಚಿಂತಪಳ್ಳಿ, ರಾಯಕೋಡ ರೈತರಿಗೆ ಸೇತುವೆ ಅತಿ ಅವಶ್ಯಕವಾಗಿದ್ದು, ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸಿ ಹೊಸದಾಗಿ ಸೇತುವೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಟಿಎಪಿಸಿಎಂಎಸ್ ನಿರ್ದೇಶಕ ಮಲ್ಲಿಕಾರ್ಜುನ ಕೊಡದೂರ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>