ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಸ್ಪರ್ಧೆ: ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ

ಚಿತ್ತಾಪುರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಲು ಸುಭಾಷ ರಾಠೋಡ ಸಿದ್ಧತೆ
Last Updated 14 ಫೆಬ್ರುವರಿ 2023, 4:40 IST
ಅಕ್ಷರ ಗಾತ್ರ

ಚಿತ್ತಾಪುರ (ಕಲಬುರಗಿ ಜಿಲ್ಲೆ): ಗದಗ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ ರಾಠೋಡ ಅವರು ಚಿತ್ತಾಪುರ ಮತಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

‘ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ಜಾತ್ಯತೀತ ತತ್ವ, ಸಿದ್ಧಾಂತಗಳಿಗೆ ಬದ್ಧವಾಗಿದೆ. ಸಮಾಜಮುಖಿ, ಜನಪರ ಕೆಲಸ ಮಾಡಲು ಅವಕಾಶವಿದೆ. ಚಿತ್ತಾಪುರ ಮತಕ್ಷೇತ್ರದ ಪರಿಚಯವಿದೆ. ಜನರ ನಾಡಿಮಿಡಿತ, ಸಮಸ್ಯೆ ಅರಿತಿರುವೆ. ಹೀಗಾಗಿ ಚಿತ್ತಾಪುರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದೇನೆ’ ಎಂದು ಸುಭಾಷಚಂದ್ರ ತಿಳಿಸಿದರು.

ಅವರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಸಂಕದಾಳ ಗ್ರಾಮದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT