ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮತದಾನವೊಂದನ್ನು ಹೊರತುಪಡಿಸಿ ಉಳಿದೆಲ್ಲ ಪ್ರಕ್ರಿಯೆಗಳು ಮುಗಿದಿದ್ದವು. ಹೀಗಾಗಿ, ಮತದಾನ ದಿನಾಂಕವನ್ನು ಘೋಷಣೆ ಮಾಡುವ ಮೂಲಕ ಅಧ್ಯಕ್ಷರ ಆಯ್ಕೆಗೆ ಅನುವು ಮಾಡಿಕೊಡಬೇಕು. ರಾಜ್ಯದಾದ್ಯಂತ 3.10 ಲಕ್ಷ ಮತದಾರರಿದ್ದು, ಅವರಿಗೆ ದೈಹಿಕ ಸಂಪರ್ಕವನ್ನು ಕಾಪಾಡಿಕೊಳ್ಳುವಂತೆ ಹೇಳಿ ನಡೆಸಬಹುದಾಗಿದೆ. ಲಕ್ಷಾಂತರ ಮಕ್ಕಳು ಭಾಗವಹಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೇ ಸುಸೂತ್ರವಾಗಿ ನಡೆಸಿದ ಸರ್ಕಾರಕ್ಕೆ ಕಸಾಪ ಚುನಾವಣೆಯನ್ನು ನಡೆಸುವುದು ದೊಡ್ಡ ವಿಷಯವಲ್ಲ’ ಎಂದರು.