<p><strong>ಕಲಬುರಗಿ</strong>: ಕಾಶಿ ಮಾದರಿ ಗಂಗಾ ಆರತಿ ಮಹೋತ್ಸವ ಹಾಗೂ ವಿಠ್ಠಲ ಹೇರೂರ ಅವರ 11ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವನ್ನು ಡಿ.3ರಂದು ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಗದ್ಗುರು ಭಗವಾನ ವೇದವ್ಯಾಸ ಬ್ರಹ್ಮರ್ಷಿ ಪೀಠದ ರಾಷ್ಟ್ರೀಯ ಅಧ್ಯಕ್ಷ ಬ್ರಹ್ಮರ್ಷಿ ರಾಜುಗುರು ಸ್ವಾಮೀಜಿ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಜಗದ್ಗುರು ಭಗವಾನ ವೇದವ್ಯಾಸ ಬ್ರಹ್ಮರ್ಷಿ ಪೀಠ ಹಾಗೂ ಹೇರೂರ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ದೇವಲಗಾಣಗಾಪುರ ಗ್ರಾಮದ ವಿಠ್ಠಲ ಹೇರೂರ ಶಕ್ತಿ ಕೇಂದ್ರದಲ್ಲಿ ಬೆಳಿಗ್ಗೆ ಪುಣ್ಯಾರಾಧನೆ ಕಾರ್ಯಕ್ರಮ ನಡೆದರೆ, ಸಂಜೆ ಕುಲದೇವತೆಯಾದ ಗಂಗಾ ಆರತಿ ಮಹೋತ್ಸವ ಸಮೀಪದಲ್ಲಿರುವ ಸಂಗಮದಲ್ಲಿ ಜರುಗಲಿದೆ’ ಎಂದರು.</p>.<p>‘ಗಂಗಾ ಆರತಿ ಮತ್ತು ಕೋಲಿ, ಕಬ್ಬಲಿಗ, ಅಂಬಿಗ ಸಮಾಜದ ಜನಜಾಗೃತಿ ಅಭಿಯಾನ ಅಂಗವಾಗಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಮಾಜದ ಸಮಸ್ಯೆಗಳು ಮತ್ತು ಸಂಘಟನೆ ಬಗ್ಗೆ ಚರ್ಚಿಸಲಾಗಿದೆ’ ಎಂದು ತಿಳಿಸಿದರು.</p>.<p>ತೊನಸನಹಳ್ಳಿಯ ಕೊತ್ತಲಪ್ಪ ಸ್ವಾಮೀಜಿ ಮಾತನಾಡಿ, ‘ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರೂ ಆಗಿದ್ದ ಹೇರೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷಗಳ ರಾಜಕೀಯ ನಾಯಕರು, ಸಮುದಾಯಗಳ ಮುಖಂಡರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮಾತಾ ಮಾಣಿಕೇಶ್ವರಿ ಆಶ್ರಯಮದ ಭಾರದ್ವಾಜ್ ಸ್ವಾಮೀಜಿ, ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಬಸವರಾಜ ಬೂದಿಹಾಳ, ದೀಪಕಕುಮಾರ ಪೂಜಾರಿ, ರಾಕೇಶ ಕೋರೆ, ರಾಜಶೇಖರ ತಲಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕಾಶಿ ಮಾದರಿ ಗಂಗಾ ಆರತಿ ಮಹೋತ್ಸವ ಹಾಗೂ ವಿಠ್ಠಲ ಹೇರೂರ ಅವರ 11ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವನ್ನು ಡಿ.3ರಂದು ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಗದ್ಗುರು ಭಗವಾನ ವೇದವ್ಯಾಸ ಬ್ರಹ್ಮರ್ಷಿ ಪೀಠದ ರಾಷ್ಟ್ರೀಯ ಅಧ್ಯಕ್ಷ ಬ್ರಹ್ಮರ್ಷಿ ರಾಜುಗುರು ಸ್ವಾಮೀಜಿ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಜಗದ್ಗುರು ಭಗವಾನ ವೇದವ್ಯಾಸ ಬ್ರಹ್ಮರ್ಷಿ ಪೀಠ ಹಾಗೂ ಹೇರೂರ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ದೇವಲಗಾಣಗಾಪುರ ಗ್ರಾಮದ ವಿಠ್ಠಲ ಹೇರೂರ ಶಕ್ತಿ ಕೇಂದ್ರದಲ್ಲಿ ಬೆಳಿಗ್ಗೆ ಪುಣ್ಯಾರಾಧನೆ ಕಾರ್ಯಕ್ರಮ ನಡೆದರೆ, ಸಂಜೆ ಕುಲದೇವತೆಯಾದ ಗಂಗಾ ಆರತಿ ಮಹೋತ್ಸವ ಸಮೀಪದಲ್ಲಿರುವ ಸಂಗಮದಲ್ಲಿ ಜರುಗಲಿದೆ’ ಎಂದರು.</p>.<p>‘ಗಂಗಾ ಆರತಿ ಮತ್ತು ಕೋಲಿ, ಕಬ್ಬಲಿಗ, ಅಂಬಿಗ ಸಮಾಜದ ಜನಜಾಗೃತಿ ಅಭಿಯಾನ ಅಂಗವಾಗಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಮಾಜದ ಸಮಸ್ಯೆಗಳು ಮತ್ತು ಸಂಘಟನೆ ಬಗ್ಗೆ ಚರ್ಚಿಸಲಾಗಿದೆ’ ಎಂದು ತಿಳಿಸಿದರು.</p>.<p>ತೊನಸನಹಳ್ಳಿಯ ಕೊತ್ತಲಪ್ಪ ಸ್ವಾಮೀಜಿ ಮಾತನಾಡಿ, ‘ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರೂ ಆಗಿದ್ದ ಹೇರೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷಗಳ ರಾಜಕೀಯ ನಾಯಕರು, ಸಮುದಾಯಗಳ ಮುಖಂಡರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮಾತಾ ಮಾಣಿಕೇಶ್ವರಿ ಆಶ್ರಯಮದ ಭಾರದ್ವಾಜ್ ಸ್ವಾಮೀಜಿ, ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಬಸವರಾಜ ಬೂದಿಹಾಳ, ದೀಪಕಕುಮಾರ ಪೂಜಾರಿ, ರಾಕೇಶ ಕೋರೆ, ರಾಜಶೇಖರ ತಲಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>