ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್ಎಂಇಗಳನ್ನೇ ನಂಬಿಕೊಂಡಿರುವ ಸಹಸ್ರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಸಣ್ಣ, ಸೂಕ್ಷ್ಮ ಕೈಗಾರಿಕೆಗಳನ್ನು ಪುನರುಜ್ಜೀವನಗೊಳಿಸಬೇಕಾದರೆ ತೆರಿಗೆ ರಿಯಾಯಿತಿ, ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಸಬೇಕು. ತುರ್ತು ಕ್ರೆಡಿಟ್ ಲಿಂಕ್ ಗ್ಯಾರಂಟಿ ಯೋಜನೆಯಡಿ ಉದ್ಯಮಗಳಿಗೆ ಸಾಲವನ್ನು ವಿಸ್ತರಿಸುವಲ್ಲಿ ಸರ್ಕಾರವು ಸಹಕಾರಿ ಬ್ಯಾಂಕಿಂಗ್ ಸಂಸ್ಥೆಗಳನ್ನು ಸಹ ಸೇರಿಸಬೇಕು. ಇದರಿಂದ ಗ್ರಾಮೀಣ ಕೈಗಾರಿಕೆಗಳಿಗೆ ಸಹಾಯವಾಗುವುದಲ್ಲದೆ ವಿತರಣಾ ಜಾಲವನ್ನು ವಿಸ್ತರಿಸುತ್ತದೆ ಎಂದರು.