ಸಿಐಡಿ ವಶದಲ್ಲಿದ್ದು ವಿಚಾರಣೆ ಎದುರಿಸಿದ್ದ ಮೂವರ ಪೈಕಿ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಒಬ್ಬರನ್ನು ಉಳಿಸಿಕೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ನಿತ್ಯ ಒಬ್ಬೊಬ್ಬರನ್ನು ಕರೆಸಿಕೊಂಡು ವಿಚಾರಣೆ ಮಾಡಲಾಗುತ್ತಿದೆ. ಅವರ ನೀಡುವ ಹೇಳಿಕೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.