ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಆಪ್ತನಾಗಿದ್ದ ಬಸವರಾಜ, ಅಫಜಲಪುರ ತಾಲ್ಲೂಕಿನ ಸಾಗನೂರು ಗ್ರಾಮದ ನಿವಾಸಿ. ಆರ್.ಡಿ. ಪಾಟೀಲ ಪರವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಅಫಜಲಪುರದ ರಾಯಲ್ ಪಬ್ಲಿಕ್ ಶಾಲಾ ಕೇಂದ್ರದ ಮುಖ್ಯಸ್ಥನಾಗಿದ್ದ ಚಂದ್ರಕಾಂತ ಹಾಗೂ ಕಸ್ಟೋಡಿಯನ್ ಆಗಿದ್ದ ಬಸಣ್ಣ (ಬಸವರಾಜ) ಪೂಜಾರಿಗೆ ₹ 40 ಲಕ್ಷ ನೀಡಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಸಿಐಡಿ ಪೊಲೀಸ್ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.