ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ರೆಮ್ಡೆಸಿವಿರ್ ಇಂಜೆಕ್ಷನ್ಗಳ ಕೊರತೆ ಎದುರಾಗಿದೆ. ಇತ್ತೀಚೆಗೆ ಸಂಸದ ಡಾ. ಉಮೇಶ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಾಗ ಜಿಮ್ಸ್ ಮತ್ತು ಇಎಸ್ಐಸಿ ಆಸ್ಪತ್ರೆಯಲ್ಲಿ ಬೆಡ್ ಹೆಚ್ವಿಸುವ ಭರವಸೆಯೂ ದೊರೆತಿತ್ತು. ಆದರೆ ಈವರೆಗೂ ಸಾಧ್ಯವಾಗಿಲ್ಲ’ ಎಂದರು.