<p><strong>ಕಲಬುರಗಿ:</strong> ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್ಡಿಬಿ)ಯಿಂದ 2025-26ನೇ ಸಾಲಿನ ಕಾಮಗಾರಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ’ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಉತ್ತರಿಸಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.</p>.<p>‘2025ನೇ ಸಾಲಿನಲ್ಲಿ ಆರಂಭಿಕ ಶಿಲ್ಕು ₹3090.24 ಕೋಟಿಗಳಿದ್ದು, ಈವರೆಗೆ ₹1628.49 ಕೋಟಿ ವೆಚ್ಚ ಮಾಡಲಾಗಿದೆ. ಮಂಡಳಿ ಪಿ.ಡಿ ಖಾತೆಯಲ್ಲಿ ಇನ್ನೂ ₹1461.75 ಕೋಟಿ ಅನುದಾನ ಮಂಡಳಿಯಲ್ಲಿ ಬಾಕಿ ಇರುವುದರಿಂದ ಈ ಅನುದಾನವನ್ನು ಖರ್ಚು ಮಾಡಿ, ನಂತರ ಪ್ರಸ್ತಾವನೆ ಸಲ್ಲಿಸಲು ಆರ್ಥಿಕ ಇಲಾಖೆಯು ಸೂಚಿಸಿದೆ. ಇದರಿಂದ ಕೆಕೆಆರ್ಡಿಬಿಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘2025-26ನೇ ಸಾಲಿನ ಮಂಡಳಿಯ ಕ್ರಿಯಾಯೋಜನೆಯನ್ನು ರೂಪಿಸಲು ರಾಜ್ಯಪಾಲರ ಅನುಮೋದನೆ ಪಡೆದು, ಸರ್ಕಾರ ಜುಲೈ 25ರಂದು ಆದೇಶ ಹೊರಡಿಸಿದೆ. ಅದರಂತೆ, ಮಂಡಳಿಯು ಈವರೆಗೆ ₹1401.87 ಕೋಟಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ. ಬಾಕಿ ಉಳಿದ ಅನುದಾನ ₹3598.13 ಕೋಟಿಗಳಿಗೆ ಕ್ರಿಯಾಯೋಜನೆ ರೂಪಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಮೈಕ್ರೊ/ ಮ್ಯಾಕ್ರೊ ಕ್ರಿಯಾಯೋಜನೆಯಡಿ ಆಯಾ ಜಿಲ್ಲಾಧಿಕಾರಿಗಳಿಗೆ ನಿಗದಿತ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ರಿಯಾಯೋಜನೆ ವಿವರ ನೀಡದ ಕಾರಣ ಡಿ.ಸಿಗಳಿಂದ ಕ್ರಿಯಾಯೋಜನೆ ಮಂಡಳಿಗೆ ಸಲ್ಲಿಸಲು ವಿಳಂಬವಾಗುತ್ತಿದೆ’ ಎಂದು ಸಚಿವರು ಹೇಳಿದ್ದಾರೆ.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ಬೀದರ್ ಜಿಲ್ಲೆಗೆ ₹437.91 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಕಾಮಗಾರಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ’ ಎಂದು ಸಚಿವರು ತಿಳಿಸಿದ್ದಾರೆ.</p>.<p>ಸುನಿಲ್ ವಲ್ಯಾಪುರೆ ಅವರಿಗೆ ಸಚಿವರು ನೀಡಿದ ಉತ್ತರ ಪತ್ರದಲ್ಲಿ ವಿಧಾನ ಸಭೆಯಿಂದ ಚುನಾಯಿತರಾದವರು ಎಂದು ಬರೆಯಲಾಗಿದೆ. ವಲ್ಯಾಪುರೆ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್ಡಿಬಿ)ಯಿಂದ 2025-26ನೇ ಸಾಲಿನ ಕಾಮಗಾರಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ’ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಉತ್ತರಿಸಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.</p>.<p>‘2025ನೇ ಸಾಲಿನಲ್ಲಿ ಆರಂಭಿಕ ಶಿಲ್ಕು ₹3090.24 ಕೋಟಿಗಳಿದ್ದು, ಈವರೆಗೆ ₹1628.49 ಕೋಟಿ ವೆಚ್ಚ ಮಾಡಲಾಗಿದೆ. ಮಂಡಳಿ ಪಿ.ಡಿ ಖಾತೆಯಲ್ಲಿ ಇನ್ನೂ ₹1461.75 ಕೋಟಿ ಅನುದಾನ ಮಂಡಳಿಯಲ್ಲಿ ಬಾಕಿ ಇರುವುದರಿಂದ ಈ ಅನುದಾನವನ್ನು ಖರ್ಚು ಮಾಡಿ, ನಂತರ ಪ್ರಸ್ತಾವನೆ ಸಲ್ಲಿಸಲು ಆರ್ಥಿಕ ಇಲಾಖೆಯು ಸೂಚಿಸಿದೆ. ಇದರಿಂದ ಕೆಕೆಆರ್ಡಿಬಿಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘2025-26ನೇ ಸಾಲಿನ ಮಂಡಳಿಯ ಕ್ರಿಯಾಯೋಜನೆಯನ್ನು ರೂಪಿಸಲು ರಾಜ್ಯಪಾಲರ ಅನುಮೋದನೆ ಪಡೆದು, ಸರ್ಕಾರ ಜುಲೈ 25ರಂದು ಆದೇಶ ಹೊರಡಿಸಿದೆ. ಅದರಂತೆ, ಮಂಡಳಿಯು ಈವರೆಗೆ ₹1401.87 ಕೋಟಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ. ಬಾಕಿ ಉಳಿದ ಅನುದಾನ ₹3598.13 ಕೋಟಿಗಳಿಗೆ ಕ್ರಿಯಾಯೋಜನೆ ರೂಪಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಮೈಕ್ರೊ/ ಮ್ಯಾಕ್ರೊ ಕ್ರಿಯಾಯೋಜನೆಯಡಿ ಆಯಾ ಜಿಲ್ಲಾಧಿಕಾರಿಗಳಿಗೆ ನಿಗದಿತ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕ್ರಿಯಾಯೋಜನೆ ವಿವರ ನೀಡದ ಕಾರಣ ಡಿ.ಸಿಗಳಿಂದ ಕ್ರಿಯಾಯೋಜನೆ ಮಂಡಳಿಗೆ ಸಲ್ಲಿಸಲು ವಿಳಂಬವಾಗುತ್ತಿದೆ’ ಎಂದು ಸಚಿವರು ಹೇಳಿದ್ದಾರೆ.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ಬೀದರ್ ಜಿಲ್ಲೆಗೆ ₹437.91 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಕಾಮಗಾರಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ’ ಎಂದು ಸಚಿವರು ತಿಳಿಸಿದ್ದಾರೆ.</p>.<p>ಸುನಿಲ್ ವಲ್ಯಾಪುರೆ ಅವರಿಗೆ ಸಚಿವರು ನೀಡಿದ ಉತ್ತರ ಪತ್ರದಲ್ಲಿ ವಿಧಾನ ಸಭೆಯಿಂದ ಚುನಾಯಿತರಾದವರು ಎಂದು ಬರೆಯಲಾಗಿದೆ. ವಲ್ಯಾಪುರೆ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>