ನಗರದಲ್ಲಿ ಮಂಗಳವಾರ ಕೆಕೆಆರ್ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮಂಡಳಿಯು ಅನೇಕ ವರ್ಷಗಳಿಂದ ಶಾಲಾ, ಕಾಲೇಜು, ಗ್ರಂಥಾಲಯ, ಪಿ.ಎಚ್.ಸಿ, ಸಿ.ಎಚ್.ಸಿ, ತಾಲ್ಲೂಕು ಆಸ್ಪತ್ರೆ, ಸಿಸಿ ರಸ್ತೆ, ಸೇತುವೆ ನಿರ್ಮಾಣ, ಕುಡಿಯುವ ನೀರು, ಕೆರೆಗಳ ನಿರ್ಮಾಣ ಸೇರಿದಂತೆ ಸಾಮಾಜಿಕ ಮತ್ತು ಸಾಮಾಜಿಕೇತರ ಕ್ಷೇತ್ರಗಳಿಗೆ ಹಣ ಮೀಸಲಿರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಹೊಂದಬೇಕಾದರೆ ಇವುಗಳನ್ನು ಹೊರತುಪಡಿಸಿ ಬೇರೆ ವಲಯಗಳಿಗೂ ಅನುದಾನ ನಿಗದಿ ಮಾಡಬೇಕು’ ಎಂದು ಅವರು ಹೇಳಿದರು.