‘ಈಶಾನ್ಯ ಕರ್ನಾಟಕ ಪದವೀಧರರ ಮತಕ್ಷೇತ್ರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ 371 (ಜೆ) ಕಾಯ್ದೆ ನೆರವಾಗುತ್ತಿದೆ. ಅದರ ಜಾರಿಗೆ ಕಾಂಗ್ರೆಸ್ ನಾಯಕರ ಶ್ರಮವೇ ಕಾರಣ ಎಂಬುದನ್ನು ಪದವೀಧರರು ಮರೆಯಬಾರದು. ಜೊತೆಗೆ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ, ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಮುಂತಾದ ಕ್ರಮಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಳ್ಳಲು ದಿಟ್ಟ ಹೆಜ್ಜೆ ಇಟ್ಟಿದೆ. ಪದವಿ ಹಾಗೂ ಡಿಪ್ಲೊಮಾ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲು ‘ಯುವ ನಿಧಿ’ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ’ ಎಂದು ಮತದಾರರ ಗಮನ ಸೆಳೆದರು.