ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಆರೋಗ್ಯ ಆವಿಷ್ಕಾರಕ್ಕೆ ₹250 ಕೋಟಿ ಖರ್ಚು: ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್‌ ಸಿಂಗ್

Published : 3 ಮಾರ್ಚ್ 2024, 14:11 IST
Last Updated : 3 ಮಾರ್ಚ್ 2024, 14:11 IST
ಫಾಲೋ ಮಾಡಿ
Comments
ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರ ನಡೆಸಿದ ಅಭ್ಯಾಸವಿದೆ. ಹೀಗಾಗಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಸಿಎಂ ಅವರ ಆರೋಪ ನಿಜ ಆಗಿರಬಹುದು
ಡಾ.ಅಜಯ್‌ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷ
ಕಾಮಗಾರಿಗಳ ಮೇಲೆ ನಿಗಾ ಇರಿಸಲು ಗುಣಮಟ್ಟ ನಿಯಂತ್ರಣದ ಪ್ರತ್ಯೇಕ ಎಂಜಿನಿಯರಿಂಗ್
ವಿಭಾಗ ಸ್ಥಾಪಿಸಿ ಪ್ರತಿ ಜಿಲ್ಲೆಯಲ್ಲಿ ಉಪ ವಿಭಾಗ ಸ್ಥಾಪಿಸುವ ಚಿಂತನೆ ಇದೆ.
ಎಂ.ಸುಂದರೇಶ ಬಾಬು, ಕೆಕೆಆರ್‌ಡಿಬಿ ಕಾರ್ಯದರ್ಶಿ
‘ಕೆಕೆಆರ್‌ಡಿಬಿ ಹಾರ್ಟ್‌ ಲೈನ್‌ ಆಂಬುಲೆನ್ಸ್‌ ಸೇವೆ’
‘ಕೆಕೆಆರ್‌ಡಿಬಿ ಹಾರ್ಟ್‌ ಲೈನ್‌ ಆಂಬುಲೆನ್ಸ್‌ ಸೇವೆ ಆರಂಭಿಸಲಿದ್ದು ಇದಕ್ಕಾಗಿ ಜಯದೇವ ಆಸ್ಪತ್ರೆ ಜತೆಗೆ ಕೈಜೋಡಿಸಲಾಗುವುದು. 41 ಬೇಸಿಕ್ ಲೈಫ್‌ ಸಪೋರ್ಟ್‌ (ಬಿಎಲ್‌ಎಸ್‌) ಹಾಗೂ 7 ಅಡ್ವಾನ್ಸ್ಡ್‌ ಲೈಫ್‌ ಸಪೋರ್ಟ್‌ (ಎಎಲ್‌ಎಸ್‌) ಸೇರಿ ಒಟ್ಟು 48 ಆಂಬುಲೆನ್ಸ್‌ಗಳನ್ನು ಖರೀದಿಸಲಾಗುವುದು. ಬೇರೆ ಆಸ್ಪತ್ರೆಗಳನ್ನೂ ಇದರೊಳಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು’ ಎಂದು ಡಾ.ಅಜಯ್‌ಸಿಂಗ್ ತಿಳಿಸಿದರು. ‘ಗ್ರಾಮೀಣ ಭಾಗದಲ್ಲಿ ಹೃದಯ ಸ್ತಂಭನಕ್ಕೆ ಒಳಗಾದವರಿಗೆ ಗೋಲ್ಡನ್ ಅವರ್‌ನ 20 ನಿಮಿಷಗಳಲ್ಲಿ ತುರ್ತಾಗಿ ತಾತ್ಕಾಲಿಕ ಚಿಕಿತ್ಸೆ ಬೇಕಾಗುತ್ತಿದೆ. ಆಂಬುಲೆನ್ಸ್ ಮೂಲಕ ಸಮೀಪದ ತಾಲ್ಲೂಕು ಆಸ್ಪತ್ರೆಗಳಿಗೆ ಕರೆದೊಯ್ದು ಆ್ಯಪ್‌ ಮೂಲಕವೇ ನುರಿತ ವೈದ್ಯರ ಸಲಹೆ ಪಡೆದು ತಾತ್ಕಾಲಿಕ ಚಿಕಿತ್ಸೆ ಕೊಡಿಸಲಾಗುತ್ತದೆ. ಆ ಬಳಿಕ ಜಯದೇವ ಆಸ್ಪತ್ರೆಗೆ ದಾಖಲಿಸಲಾಗುವುದು. ಆಂಬುಲೆನ್ಸ್ ಖರೀದಿಗೆ ₹16.40 ಕೋಟಿ ಮೊತ್ತದ ಟೆಂಡರ್ ಅನ್ನು 15 ದಿನಗಳಲ್ಲಿ ಆಹ್ವಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.
ರಾಯಚೂರಲ್ಲಿ ಮಾನವ ಜೀನೋಮ್ ಸಂಶೋಧನಾ ಕೇಂದ್ರ
‘ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ದೊಡ್ಡ ಆರೋಗ್ಯ ಸಮಸ್ಯೆಯಾಗಿದೆ. ಇದರ ಅಧ್ಯಯನಕ್ಕಾಗಿ ರಾಯಚೂರಿನಲ್ಲಿ ಮಾನವ ಜೀನೋಮ್ ಸಂಶೋಧನಾ ಕೇಂದ್ರ ನಿರ್ಮಾಣ ಮಾಡಲಾಗುವುದು’ ಎಂದು ಡಾ.ಅಜಯ್‌ಸಿಂಗ್ ಹೇಳಿದರು. ‘ಸಂಶೋಧನಾ ಕೇಂದ್ರದ ನಿರ್ಮಾಣಕ್ಕೆ ಕೆಕೆಆರ್‌ಡಿಬಿ ₹48 ಕೋಟಿ ನೀಡಲಿದೆ. ಕೇಂದ್ರದಲ್ಲಿ ಅಪೌಷ್ಟಿಕತೆ ಕುರಿತು ಸಂಶೋಧನೆ ಅಧ್ಯಯನ ಹಾಗೂ ಅದರ ನಿವಾರಣೆಯ ಮಾರ್ಗಗಳನ್ನು ಕಂಡುಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT