<p><strong>ಕಲಬುರಗಿ</strong>: ಕೋಲಿ, ಕಬ್ಬಲಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಯಿತು.</p><p>ನಗರದ ಜಗತ್ ವೃತ್ತದಲ್ಲಿ ಜಮಾಯಿಸಿದ ಕೋಲಿ, ಕಬ್ಬಲಿಗ ಸಮಾಜದ ಸಾವಿರಾರು ಮಂದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು ಗಂಟೆಗಳಿಂದ ಜಗತ್ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.</p><p>ಪ್ರತಿಭಟನಾ ಜಾಥಾವು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್ ಎದುರಿನಿಂದ ಜಿಲ್ಲಾಧಿಕಾರಿ ಕಚೇರಿ ತನಕ ನಡೆಯಲಿದ್ದು, ಗ್ರಾಮೀಣ ಭಾಗದಿಂದ ಬರುವ ಜನರಿಗಾಗಿ ಪ್ರತಿಭಟನೆ ನಿರತರು ಕಾಯುತ್ತಿದ್ದಾರೆ.</p><p>'ಜೈ ಕೋಲಿ, ಜೈ ಅಂಬಿಗ' ಎಂದು ಬರೆದ ಟೊಪ್ಪಿಗೆ ಧರಿಸಿದ್ದ ನೂರಾರು ಮಂದಿ, ನಿಜಶರಣ ಅಂಬಿಗರ ಚೌಡಯ್ಯರ ಬಾವುಟಗಳನ್ನು ಬೀಸುತ್ತ ಮೆರವಣಿಗೆಯಲ್ಲಿ ಸಾಗಿದರು.</p><p>'ಕೋಲಿ, ಕಬ್ಬಲಿಗ ಸಮಾಜ ವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ 1996ರಿಂದ ಹಲವು ಬಾರಿಗ ಗಂಗಾಮತ ಮತ್ತು ಅದರ ಉಪಜಾತಿಗಳ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೂ ಪದೇಪದೆ ಆ ಪ್ರಸ್ತಾವವನ್ನು ವಾಪಸ್ ಕಳುಹಿಸಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಅದರ ಬದಲು ಟೋಕರೆ ಕೋಲಿಯ ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಗಳನ್ನು ಅಧ್ಯಯನ ಮಾಡಿ ಸೂಕ್ತ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಕೂಡಲೇ ಪ್ರಸ್ತಾವ ಕಳುಹಿಸಬೇಕು' ಎಂದು ಮುಖಂಡರು ಆಗ್ರಹಿಸಿದರು.</p><p>'ಇದು ಯಾರ ವಿರುದ್ಧದ ಹೋರಾಟವಲ್ಲ. ನಾವು ಯಾರ ಅಪ್ಪನ ಆಸ್ತಿಯನ್ನೂ ಕೇಳುತ್ತಿಲ್ಲ. ನಾವು ಬರೀ ನಮ್ಮ ಹಕ್ಕು ಕೇಳುತ್ತಿದ್ದೇವೆ' ಎಂದು ಯುವಜನರು ಆಕ್ರೋಶ ವ್ಯಕ್ತಪಡಿಸಿದರು.</p><p>ಪ್ರತಿಭಟನೆ ಅಂಗವಾಗಿ ನಗರದ ಹಲವು ರಸ್ತೆಗಳಲ್ಲಿ ಪೊಲೀಸ್ ಇಲಾಖೆಯು ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕೋಲಿ, ಕಬ್ಬಲಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಯಿತು.</p><p>ನಗರದ ಜಗತ್ ವೃತ್ತದಲ್ಲಿ ಜಮಾಯಿಸಿದ ಕೋಲಿ, ಕಬ್ಬಲಿಗ ಸಮಾಜದ ಸಾವಿರಾರು ಮಂದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು ಗಂಟೆಗಳಿಂದ ಜಗತ್ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.</p><p>ಪ್ರತಿಭಟನಾ ಜಾಥಾವು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್ ಎದುರಿನಿಂದ ಜಿಲ್ಲಾಧಿಕಾರಿ ಕಚೇರಿ ತನಕ ನಡೆಯಲಿದ್ದು, ಗ್ರಾಮೀಣ ಭಾಗದಿಂದ ಬರುವ ಜನರಿಗಾಗಿ ಪ್ರತಿಭಟನೆ ನಿರತರು ಕಾಯುತ್ತಿದ್ದಾರೆ.</p><p>'ಜೈ ಕೋಲಿ, ಜೈ ಅಂಬಿಗ' ಎಂದು ಬರೆದ ಟೊಪ್ಪಿಗೆ ಧರಿಸಿದ್ದ ನೂರಾರು ಮಂದಿ, ನಿಜಶರಣ ಅಂಬಿಗರ ಚೌಡಯ್ಯರ ಬಾವುಟಗಳನ್ನು ಬೀಸುತ್ತ ಮೆರವಣಿಗೆಯಲ್ಲಿ ಸಾಗಿದರು.</p><p>'ಕೋಲಿ, ಕಬ್ಬಲಿಗ ಸಮಾಜ ವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ 1996ರಿಂದ ಹಲವು ಬಾರಿಗ ಗಂಗಾಮತ ಮತ್ತು ಅದರ ಉಪಜಾತಿಗಳ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೂ ಪದೇಪದೆ ಆ ಪ್ರಸ್ತಾವವನ್ನು ವಾಪಸ್ ಕಳುಹಿಸಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಅದರ ಬದಲು ಟೋಕರೆ ಕೋಲಿಯ ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಗಳನ್ನು ಅಧ್ಯಯನ ಮಾಡಿ ಸೂಕ್ತ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಕೂಡಲೇ ಪ್ರಸ್ತಾವ ಕಳುಹಿಸಬೇಕು' ಎಂದು ಮುಖಂಡರು ಆಗ್ರಹಿಸಿದರು.</p><p>'ಇದು ಯಾರ ವಿರುದ್ಧದ ಹೋರಾಟವಲ್ಲ. ನಾವು ಯಾರ ಅಪ್ಪನ ಆಸ್ತಿಯನ್ನೂ ಕೇಳುತ್ತಿಲ್ಲ. ನಾವು ಬರೀ ನಮ್ಮ ಹಕ್ಕು ಕೇಳುತ್ತಿದ್ದೇವೆ' ಎಂದು ಯುವಜನರು ಆಕ್ರೋಶ ವ್ಯಕ್ತಪಡಿಸಿದರು.</p><p>ಪ್ರತಿಭಟನೆ ಅಂಗವಾಗಿ ನಗರದ ಹಲವು ರಸ್ತೆಗಳಲ್ಲಿ ಪೊಲೀಸ್ ಇಲಾಖೆಯು ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>