‘ಸಂಸದ ಜಾಧವ ಅವರು ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲಕರ್ಟಿಯ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ್ದರು. ಅಲ್ಲಿ, ‘ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ನಾಯಕರು ಹಿಂದೂ ವಿರೋಧಿ ಮಾನಸಿಕತೆ ಪ್ರದರ್ಶಿಸಿದರು. ತುಷ್ಟೀಕರಣ ನೀತಿಯಿಂದ ಒಂದು ಸಮುದಾಯದ ಓಲೈಕೆಗಾಗಿ ನೀಚ ರಾಜಕಾರಣ ಮಾಡಿ, ಭಾರತದ ಸನಾತನ ಹಿಂದೂ ಧರ್ಮೀಯರ ಮನಸ್ಸಿಗೆ ಘಾಸಿ ಮಾಡಿದ ಕಾಂಗ್ರೆಸ್ಗೆ ಈ ಸಲ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎನ್ನುವ ಮೂಲಕ ಮತಕ್ಷೇತ್ರದ ಜನರಲ್ಲಿ ಕೋಮು ಸಾಮರಸ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಧರ್ಮಗಳ ನಡುವೆ ಗಲಭೆಗೆ ಪ್ರಚೋದನೆ ನೀಡಿ, ಮತಗಳನ್ನು ಗಳಿಸುವ ನೀಡುವ ಹೇಳಿಕೆ ಇದಾಗಿದೆ. ಹೀಗಾಗಿ 6 ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಬಿಜೆಪಿ ಅಭ್ಯರ್ಥಿ ಮೇಲೆ ನಿರ್ಬಂಧ ಹೇರಬೇಕು. ಜೊತೆಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಪ್ರಕರಣದ ದಾಖಲಿಸಬೇಕು’ ಎಂದು ದೂರಿನಲ್ಲಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಹಾಗೂ ಆರ್ಟಿಐ ವಿಭಾಗದ ಕಾರ್ಯದರ್ಶಿ ಭೀಮನಗೌಡ ಪರನಗೊಂಡ ಒತ್ತಾಯಿಸಿದ್ದಾರೆ.