ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಚರ್ಚಿಸಿದ್ದು, ಅವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ 2,000ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ತೂಗುಯ್ಯಾಲೆಯಲ್ಲಿರುವಾಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರಿಗೂ ಪರೀಕ್ಷೆ ಬರೆಯಲು ಅನುವುಮಾಡಿಕೊಡಬೇಕೆಂದು ಸರ್ಕಾರಕ್ಕೆ ವಿನಂತಿಸುತ್ತೇನೆ' ಎಂದಿದ್ದಾರೆ.