ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ‘ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮೊಟ್ಟೆ ಪೂರೈಸುವ ಏಜೆಂಟರು, ಸಿಡಿಪಿಒಗಳು, ಮೇಲ್ವಿಚಾರಕರು ಸೇರಿಕೊಂಡು ಕೋಟಿಗಟ್ಟಲೇ ಭ್ರಷ್ಟಾಚಾರ ನಡೆಸಿದ್ದಾರೆ. ಮೊಟ್ಟೆಗಳನ್ನು ಪೂರೈಸದಿದ್ದರೂ ಅಂಗನವಾಡಿ ಕಾರ್ಯಕರ್ತೆಯರನ್ನು ಹೆದರಿಸಿ, ಪೂರೈಸಲಾಗಿದೆ ಎಂಬ ನಕಲಿ ರಸೀದಿ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜತೆಗೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆ, ಕಾಳಗಳನ್ನು ಕಡಿಮೆ ಪ್ರಮಾಣದಲ್ಲಿ ಪೂರೈಸಿ, ಪೂರ್ಣಪ್ರಮಾಣದಲ್ಲಿ ಪೂರೈಸಲಾಗಿದೆ ಎಂಬ ನಕಲಿ ರಸೀದಿಯನ್ನು ಪಡೆದು, ಭ್ರಷ್ಟಾಚಾರ ಎಸಗಿದ್ದಾರೆ’ ಎಂದು ಆರೋಪಿಸಿದರು.