ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲೇ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕದ ಕಲಬುರ್ಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೀದರ್ ಜಿಲ್ಲೆಗಳು ಕೊನೆಯ ಸ್ಥಾನದಲ್ಲಿವೆ. ಮಾನವ ಅಭಿವೃದ್ಧಿಯ ಸೂಚ್ಯಂಕದ ಹೆಚ್ಚಳವೇ ಅಭಿವೃದ್ಧಿಯ ನಿಜವಾದ ಮಾನದಂಡ. ಈ ಮಾನದಂಡದಲ್ಲಿ ಕಲ್ಯಾಣ ಕರ್ನಾಟಕ ಸಾಕಷ್ಟು ಹಿಂದುಳಿದಿರುವ ಬಗ್ಗೆ ಡಾ.ಡಿ.ಎಂ.ನಂಜುಂಡಪ್ಪ ಅವರು 1999ರಲ್ಲಿಯೇ ವರದಿ ನೀಡಿದ್ದರು. ಈಗಲೂ ಪರಿಸ್ಥಿತಿ ಬದಲಾಗಿಲ್ಲ. ಕಲ್ಯಾಣ ಮಂಡಳಿಯನ್ನು ಹೆಚ್ಚು ಬಲಪಡಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಬೇಕು’ ಎಂದರು.