<p><strong>ಕಲಬುರಗಿ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಆಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ 21 ಪ್ರಗತಿಪರ ರೈತರು/ರೈತ ಮಹಿಳೆಯರಿಗೆ ಕೃಷಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳಿಗೆ ₹498.73 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲೆಯ ರೈತರಲ್ಲಿ ಬೆಳೆ ವಿಮೆ ಕುರಿತಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಕಲಬುರಗಿ ರೊಟ್ಟಿ ಕಾರ್ಯಕ್ರಮ ಪಾರಂಭಿಸಿದಾಗಿನಿಂದ ಬಹಳಷ್ಟು ರೈತ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಿದಂತಾಗಿದೆ’ ಎಂದು ತಿಳಿಸಿದರು.</p>.<p>ಜಂಟಿ ಕೃಷಿನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ‘2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ₹656.56 ಕೋಟಿ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿರುತ್ತದೆ. ಅಲ್ಲದೆ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 3,00,952 ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿದ್ದು, ಬೆಳೆ ವಿಮೆ ಮಧ್ಯಂತರ ಪರಿಹಾರ ₹234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ ₹8.90 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ದಂಗಾಪೂರ ಅವರು, ಕೃಷಿಕ ಸಮಾಜ ನಡೆಸಿಕೊಂಡು ಬಂದ ಚಟುವಟಿಕೆಗಳು ಹಾಗೂ ಜಿಲ್ಲೆಯ ರೈತರಿಗೆ ಸರ್ಕಾರದಿಂದ ನೀಡಲಾದ ಬೆಳೆಹಾನಿ ಪರಿಹಾರ, ಬೆಳೆ ವಿಮೆ ಹಾಗೂ ಇತರೆ ವಿಷಯಗಳ ಕುರಿತು ತಿಳಿಸಿದರು.</p>.<p>ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳು, ಹಾಗೂ ರೈತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಆಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ 21 ಪ್ರಗತಿಪರ ರೈತರು/ರೈತ ಮಹಿಳೆಯರಿಗೆ ಕೃಷಿ ಕಾಯಕ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳಿಗೆ ₹498.73 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲೆಯ ರೈತರಲ್ಲಿ ಬೆಳೆ ವಿಮೆ ಕುರಿತಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಕಲಬುರಗಿ ರೊಟ್ಟಿ ಕಾರ್ಯಕ್ರಮ ಪಾರಂಭಿಸಿದಾಗಿನಿಂದ ಬಹಳಷ್ಟು ರೈತ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಿದಂತಾಗಿದೆ’ ಎಂದು ತಿಳಿಸಿದರು.</p>.<p>ಜಂಟಿ ಕೃಷಿನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ‘2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ₹656.56 ಕೋಟಿ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿರುತ್ತದೆ. ಅಲ್ಲದೆ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 3,00,952 ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿದ್ದು, ಬೆಳೆ ವಿಮೆ ಮಧ್ಯಂತರ ಪರಿಹಾರ ₹234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ ₹8.90 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ದಂಗಾಪೂರ ಅವರು, ಕೃಷಿಕ ಸಮಾಜ ನಡೆಸಿಕೊಂಡು ಬಂದ ಚಟುವಟಿಕೆಗಳು ಹಾಗೂ ಜಿಲ್ಲೆಯ ರೈತರಿಗೆ ಸರ್ಕಾರದಿಂದ ನೀಡಲಾದ ಬೆಳೆಹಾನಿ ಪರಿಹಾರ, ಬೆಳೆ ವಿಮೆ ಹಾಗೂ ಇತರೆ ವಿಷಯಗಳ ಕುರಿತು ತಿಳಿಸಿದರು.</p>.<p>ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳು, ಹಾಗೂ ರೈತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>